ಸಕಲ ಸೇನಾ ಗೌರವಗಳೊಂದಿಗೆ ನೆರವೇರಿದ ಲೆಫ್ಟಿನೆಂಟ್ ಕರ್ನಲ್ ನಿರಂಜನ್ ಕುಮಾರ್ ಅಂತಿಮ ಸಂಸ್ಕಾರ 
ದೇಶ

ಹುಟ್ಟೂರಲ್ಲಿ ವೀರ ಯೋಧ ನಿರಂಜನ್‌ ಕುಮಾರ್ ಅಂತ್ಯಕ್ರಿಯೆ

ಮೊನ್ನೆ ಭಾನುವಾರ ಪಠಾಣ್‌ ಕೋಟ್‌ ವಾಯುನೆಲೆಯ ಮೇಲೆ ನಡೆದ ಉಗ್ರರ ದಾಳಿಯ ಸಂದರ್ಭದಲ್ಲಿ ಹುತಾತ್ಮರಾದ ಎನ್‌ಎಸ್‌ಜಿ ಕಮಾಂಡೊ ಲೆಫ್ಟಿನೆಂಟ್‌ ಕರ್ನಲ್ ನಿರಂಜನ್‌ ಕುಮಾರ್...

ಪಾಲಕ್ಕಾಡ್ (ಕೇರಳ) : ಮೊನ್ನೆ ಭಾನುವಾರ ಪಠಾಣ್‌ ಕೋಟ್‌ ವಾಯುನೆಲೆಯ ಮೇಲೆ ನಡೆದ ಉಗ್ರರ ದಾಳಿಯ ಸಂದರ್ಭದಲ್ಲಿ ಹುತಾತ್ಮರಾದ ಎನ್‌ಎಸ್‌ಜಿ ಕಮಾಂಡೊ ಲೆಫ್ಟಿನೆಂಟ್‌ ಕರ್ನಲ್ ನಿರಂಜನ್‌ ಕುಮಾರ್ ಅವರ ಅಂತ್ಯ ಸಂಸ್ಕಾರ ಅವರ ಹುಟ್ಟೂರಾದ ಪಾಲಕ್ಕಾಡಿನ ಯಲಂಬೆಲಸರಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ನೆರವೇರಿತು.

ಭಾರತೀಯ ಸೇನೆಯು ಸಕಲ ಗೌರವದೊಂದಿಗೆ ಅಂತಿಮ ನಮನ ಸಲ್ಲಿಸಿ ಝಡ್‌ಪಿ  5158 ವಿಶೇಷ ಸೇನಾ ಹೆಲಿಕಾಪ್ಟರ್‌ನಲ್ಲಿ ಪಾಲಕ್ಕಾಡ್‌ಗೆ ಶರೀರ ಕೊಂಡೊಯ್ಯಲಾಗಿತ್ತು. ಅಲ್ಲಿ ಅವರ ಅಂತ್ಯಕ್ರಿಯೆಯನ್ನು ಇಂದು ಮಧ್ಯಾಹ್ನದ ವೇಳೆಗೆ ನೆರವೇರಿಸಲಾಯಿತು.ಅವರ ಮೂಲ ಮನೆಯಲ್ಲಿ ಸರ್ಕಾರಿ ಮತ್ತು ಸೇನಾ ಗೌರವಗಳ ಬಳಿಕ ಗಾಳಿಯಲ್ಲಿ 3 ಸುತ್ತು ಗುಂಡು ಹಾರಿಸಲಾಯಿತು. ಈ ವೇಳೆ ಕೇರಳ ಸರ್ಕಾರದ ಸಚಿವರು,ಅಧಿಕಾರಿಗಳು, ಸೇನಾ ಪಡೆ ಮತ್ತು ಎನ್‌ಎಸ್‌ಜಿ ಕಮಾಂಡೊ ಪಡೆಗಳ ಅಧಿಕಾರಿಗಳು, ಸೈನಿಕರು ಉಪಸ್ಥಿತರಿದ್ದರು.

ಪಂಜಾಬ್ ನ ಪಠಾಣ್ ಕೋಟ್ ನಿಂದ ನಿರಂಜನ್ ಅವರ ಪಾರ್ಥಿವ ಶರೀರವನ್ನು ನಿನ್ನೆ ಬೆಂಗಳೂರಿಗೆ ಕರೆ ತರಲಾಗಿತ್ತು.ನಿರಂಜನ್ ಅವರು ಹುಟ್ಟಿದ್ದು, ಬೆಳೆದಿದ್ದು ಎಲ್ಲ ಬೆಂಗಳೂರಿನ ದೊಡ್ಡಬೊಮ್ಮಸಂದ್ರದಲ್ಲಿ. ಅವರ ಅಂತಿಮ ಸಾರ್ವಜನಿಕ ದರ್ಶನಕ್ಕಾಗಿ ಬಿಇಎಲ್ ಶಾಲಾ ಆಟದ ಮೈದಾನದಲ್ಲಿ ಇಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT