ಎನ್‌ಐಎ ಮುಖ್ಯಸ್ಥ ಶರದ್ ಕುಮಾರ್ 
ದೇಶ

ಪಠಾಣ್‌ಕೋಟ್ ದಾಳಿ ಹಿಂದೆ ಪಾಕ್ ಕೈವಾಡ: ಎನ್‌ಐಎ ಮುಖ್ಯಸ್ಥ

ಪಠಾಣ್ ಕೋಟ್ ದಾಳಿಯ ಹಿಂದೆ ಪಾಕ್ ಕೈವಾಡವಿದೆ ಎಂದು ಪ್ರಸ್ತುತ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾದಳದ...

ಮುಂಬೈ : ಪಠಾಣ್ ಕೋಟ್ ದಾಳಿಯ ಹಿಂದೆ ಪಾಕ್ ಕೈವಾಡವಿದೆ ಎಂದು ಪ್ರಸ್ತುತ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾದಳದ (ಎನ್‌ಐಎ) ಮುಖ್ಯಸ್ಥ ಹೇಳಿದ್ದಾರೆ.
ತನಿಖೆಯ ಬಗ್ಗೆ ಸುದ್ದಿ ಮಾಧ್ಯಮವೊಂದರಲ್ಲಿ ಮಾತನಾಡಿದ ಎನ್‌ಐಎ ಮುಖ್ಯಸ್ಥ ಶರದ್ ಕುಮಾರ್, ಪ್ರಕರಣಕ್ಕೆ ಸಂಬಂಧಿಸಿದಂತೆ  ಮೂರು ಎಫ್‌ಐಆರ್ ದಾಖಲಾಗಿದ್ದು ಇದರಿಂದ ಈ ಕೃತ್ಯದ ಹಿಂದೆ ಪಾಕ್ ಕೈವಾಡವಿದೆ ಎಂದು ಹೇಳಬಹುದು. ದಾಳಿಗೆ ಮುನ್ನ ಉಗ್ರರು ವಶ ಪಡಿಸಿಕೊಡ ಇನ್ನೋವಾ ಟ್ಯಾಕ್ಸಿಯ ಚಾಲಕನ ಹತ್ಯೆ, ಗುರುದಾಸ್‌ಪುರ್ ಎಸ್ಪಿ  ಸಲ್ವಿಂದರ್ ಸಿಂಗ್ ಮತ್ತು ವಾಯುನೆಲೆ ಮೇಲೆ ದಾಳಿ ಈ ಮೂರು ಪ್ರಕರಣದ ಬಗ್ಗೆ ಎಫ್‌ಐಆರ್ ದಾಖಲಾಗಿದೆ. ಈ ಎಫ್‌ಐಆರ್‌ಗಳಿಂದ ಈ ದುಷ್ಕೃತ್ಯದ ಹಿಂದೆ ಪಾಕ್ ಉಗ್ರ ಸಂಘಟನೆಗಳ ಕೈವಾಡವಿದೆ. ಆದಾಗ್ಯೂ ತನಿಖೆ ಮುಂದುವರಿದಿದ್ದು, ಇಂಥವರೇ ದಾಳಿ ನಡೆಸಿದ್ದಾರೆ ಎಂದು ಈಗ ಹೇಳಲು ಸಾಧ್ಯವಿಲ್ಲ.
ದಾಳಿ ನಡೆಸಿದ ಉಗ್ರರ ಮಾಹಿತಿ ಕಲೆ ಹಾಕಲಾಗಿದ್ದು, ಮುಂದಿನ ತನಿಖೆಗೆ ಪಾಕ್ ಸಹಾಯ ನೀಡಬಹುದು ಎಂದು ಭಾವಿಸಿದ್ದೇವೆ. ಈಗಾಗಲೇ ಉಗ್ರರ ಡಿಎನ್‌ಎ ಸ್ಯಾಂಪಲ್ ಗಳನ್ನು ಪಾಕ್‌ಗೆ ಕಳುಹಿಸಲಾಗಿದ್ದು, ಅಲ್ಲಿಂದ ಧ್ವನಿ ಸ್ಯಾಂಪಲ್‌ಗಳನ್ನು ಕಳಿಸುವಂತೆ ಕೋರಲಾಗಿದೆ ಎಂದು ಶರದ್ ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT