ದೇಶ

ಉತ್ತರ ಕೊರಿಯಾ ಶಾಂತಿ ಕದಡುವ ಕ್ರಿಯೆಗಳಿಂದ ದೂರ ಉಳಿಯಬೇಕು: ಭಾರತ

ಉತ್ತರ ಕೊರಿಯಾ ಹೈಡ್ರೋಜನ್ ಬಾಂಬ್ ಅಭಿವೃದ್ಧಿಪಡಿಸಿ ಪರೀಕ್ಷೆ ನಡೆಸಿರುವುದನ್ನು ಖಂಡಿಸಿರುವ ಅಂತಾರಾಷ್ಟ್ರೀಯ ಸಮುದಾಯದೊಂದಿಗೆ ಭಾರತವೂ ದನಿಗೂಡಿಸಿದೆ.

ನವದೆಹಲಿ: ಉತ್ತರ ಕೊರಿಯಾ ಹೈಡ್ರೋಜನ್ ಬಾಂಬ್ ಅಭಿವೃದ್ಧಿಪಡಿಸಿ ಪರೀಕ್ಷೆ ನಡೆಸಿರುವುದನ್ನು ಖಂಡಿಸಿರುವ ಅಂತಾರಾಷ್ಟ್ರೀಯ ಸಮುದಾಯದೊಂದಿಗೆ ಭಾರತವೂ ದನಿಗೂಡಿಸಿದ್ದು , ಉತ್ತರ ಕೊರಿಯಾ ಹೈಡ್ರೋಜನ್ ಬಾಂಬ್ ಪರೀಕ್ಷೆ ನಡೆಸಿರುವುದು ಆತಂಕಕಾರಿ ಎಂದು ಹೇಳಿದೆ.
ಹೈಡ್ರೋಜನ್ ಬಾಂಬ್ ಪರೀಕ್ಷೆ ನಡೆಸಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಇಲಾಖೆ, ಉತ್ತರ ಕೊರಿಯಾ ಶಾಂತಿ ಕದಡುವುದಕ್ಕೆ ಕಾರಣವಾಗುವ ಕ್ರಿಯೆಗಳಿಂದ ದೂರವುಳಿಯಬೇಕು ಎಂದು ಕರೆ ನೀಡಿದೆ. ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ಕಳೆದ ತಿಂಗಳೇ ತಮ್ಮ ದೇಶ ಹೈಡ್ರೋಜನ್ ಬಾಂಬ್ ನ್ನು ಅಭಿವೃದ್ಧಿಪಡಿಸುತ್ತಿರುವುದಾಗಿ ಘೋಷಿಸಿದ್ದರು. ಜ.6 ರಂದು ಪರೀಕ್ಷೆ ಯಶಸ್ವಿಯಾಗಿದೆ ಎಂದು ಉತ್ತರ ಕೊರಿಯಾ ಘೋಷಿಸಿದ್ದು,  ವಿಶ್ವಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಉತ್ತರ ಕೊರಿಯಾ ಈಗಾಗಲೇ ಮೂರು ಪರಮಾಣು ಬಾಂಬ್ ಗಳ ಪರೀಕ್ಷೆ ನಡೆಸಿದೆ. ಆದರೆ ಹೈಡ್ರೋಜನ್ ಬಾಂಬ್ ಪರಮಾಣು ಬಾಂಬ್ ಗಿಂತ ಹೆಚ್ಚು ಅಪಾಯಕಾರಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT