ದೇಶ

ಉತ್ತರ ಕೊರಿಯಾ ಶಾಂತಿ ಕದಡುವ ಕ್ರಿಯೆಗಳಿಂದ ದೂರ ಉಳಿಯಬೇಕು: ಭಾರತ

ಉತ್ತರ ಕೊರಿಯಾ ಹೈಡ್ರೋಜನ್ ಬಾಂಬ್ ಅಭಿವೃದ್ಧಿಪಡಿಸಿ ಪರೀಕ್ಷೆ ನಡೆಸಿರುವುದನ್ನು ಖಂಡಿಸಿರುವ ಅಂತಾರಾಷ್ಟ್ರೀಯ ಸಮುದಾಯದೊಂದಿಗೆ ಭಾರತವೂ ದನಿಗೂಡಿಸಿದೆ.

ನವದೆಹಲಿ: ಉತ್ತರ ಕೊರಿಯಾ ಹೈಡ್ರೋಜನ್ ಬಾಂಬ್ ಅಭಿವೃದ್ಧಿಪಡಿಸಿ ಪರೀಕ್ಷೆ ನಡೆಸಿರುವುದನ್ನು ಖಂಡಿಸಿರುವ ಅಂತಾರಾಷ್ಟ್ರೀಯ ಸಮುದಾಯದೊಂದಿಗೆ ಭಾರತವೂ ದನಿಗೂಡಿಸಿದ್ದು , ಉತ್ತರ ಕೊರಿಯಾ ಹೈಡ್ರೋಜನ್ ಬಾಂಬ್ ಪರೀಕ್ಷೆ ನಡೆಸಿರುವುದು ಆತಂಕಕಾರಿ ಎಂದು ಹೇಳಿದೆ.
ಹೈಡ್ರೋಜನ್ ಬಾಂಬ್ ಪರೀಕ್ಷೆ ನಡೆಸಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಇಲಾಖೆ, ಉತ್ತರ ಕೊರಿಯಾ ಶಾಂತಿ ಕದಡುವುದಕ್ಕೆ ಕಾರಣವಾಗುವ ಕ್ರಿಯೆಗಳಿಂದ ದೂರವುಳಿಯಬೇಕು ಎಂದು ಕರೆ ನೀಡಿದೆ. ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ಕಳೆದ ತಿಂಗಳೇ ತಮ್ಮ ದೇಶ ಹೈಡ್ರೋಜನ್ ಬಾಂಬ್ ನ್ನು ಅಭಿವೃದ್ಧಿಪಡಿಸುತ್ತಿರುವುದಾಗಿ ಘೋಷಿಸಿದ್ದರು. ಜ.6 ರಂದು ಪರೀಕ್ಷೆ ಯಶಸ್ವಿಯಾಗಿದೆ ಎಂದು ಉತ್ತರ ಕೊರಿಯಾ ಘೋಷಿಸಿದ್ದು,  ವಿಶ್ವಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಉತ್ತರ ಕೊರಿಯಾ ಈಗಾಗಲೇ ಮೂರು ಪರಮಾಣು ಬಾಂಬ್ ಗಳ ಪರೀಕ್ಷೆ ನಡೆಸಿದೆ. ಆದರೆ ಹೈಡ್ರೋಜನ್ ಬಾಂಬ್ ಪರಮಾಣು ಬಾಂಬ್ ಗಿಂತ ಹೆಚ್ಚು ಅಪಾಯಕಾರಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT