ಉತ್ತರ ಮತ್ತು ಈಶಾನ್ಯ ಭಾರತದಲ್ಲಿ ಭಾರಿ ಭೂಕಂಪ ಸಾಧ್ಯತೆ (ಸಂಗ್ರಹ ಚಿತ್ರ) 
ದೇಶ

ಉತ್ತರ ಮತ್ತು ಈಶಾನ್ಯ ಭಾರತದಲ್ಲಿ ಭಾರಿ ಭೂಕಂಪ ಸಾಧ್ಯತೆ..!

ಉತ್ತರ ಭಾರತ ಮತ್ತು ಈಶಾನ್ಯ ಭಾರತದಲ್ಲಿ ಭಾರಿ ಭೂಕಂಪನ ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ...

ನವದೆಹಲಿ: ಉತ್ತರ ಭಾರತ ಮತ್ತು ಈಶಾನ್ಯ ಭಾರತದಲ್ಲಿ ಭಾರಿ ಭೂಕಂಪನ ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಕೇಂದ್ರದ ಗೃಹ ಇಲಾಖೆಗೆ ಕೇಂದ್ರ ಹವಾಮಾನ ಇಲಾಖೆ ನೀಡಿರುವ ಮಾಹಿತಿಯನ್ವಯ ಈಶಾನ್ಯ ಭಾರತ ಮತ್ತು ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಶೇ.8.0 ಅಥವಾ ಅದಕ್ಕಿಂತಲೂ ಹೆಚ್ಚಿನ  ಪ್ರಮಾಣದ ಭೂಕಂಪನ ಸಂಭವಿಸುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ. ಪತ್ರಿಕೆಯ ವರದಿಯಲ್ಲಿ ಈಶಾನ್ಯ ಭಾರತದ ಹಿಮಾಲಯ ಪರ್ವತ ಶ್ರೇಣಿಯ  ರಾಜ್ಯಗಳು ಭೂಕಂಪನದ ಹೊಡೆತಕ್ಕೆ ಸಿಲುಕಲಿವೆ ಎಂದು ಎಚ್ಚರಿಕೆ ನೀಡಲಾಗಿದೆ.

ಇನ್ನು ವರದಿಯಲ್ಲಿ ಮಣಿಪುರ ರಾಜ್ಯ ಅತಿ ಹೆಚ್ಚು ಹಾನಿಗೊಳಗಾಗುವ ರಾಜ್ಯಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ ಎಂದು ವರದಿ ಹೇಳಿದೆ. ಸೋಮವಾರವಷ್ಟೇ ಈಶಾನ್ಯ ಭಾರತದ ಕೆಲ  ಪ್ರದೇಶಗಳಲ್ಲಿ ಭೂಕಂಪನ ಸಂಭವಿಸಿತ್ತು. ಇದರ ವರದಿಯನ್ನು ವಿಶ್ಲೇಷಿಸಿರುವ ಹವಾಮಾನ ಇಲಾಖೆಯ ತಜ್ಞರು ಸದ್ಯದಲ್ಲಿಯೇ ಉತ್ತರ ಭಾರತ ಮತ್ತು ಈಶಾನ್ಯ ಭಾರತದಲ್ಲಿ ಭಾರಿ  ಪ್ರಮಾಣದ ಭೂಕಂಪನ ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.

ಕಳೆದ ವರ್ಷ ಮೇ ತಿಂಗಳಿನಲ್ಲಿ ನೇಪಾಳದಲ್ಲಿ 7.3 ತೀವ್ರತೆ ಭೂಕಂಪನ ಸಂಭವಿಸಿತ್ತು. ಇದಾದ ಬಳಿಕ ಜನವರಿ 2016ರಲ್ಲಿ ಮಣಿಪುರದಲ್ಲಿ 6.7 ತೀವ್ರತೆಯ ಭೂಕಂಪನ ಸಂಭವಿಸಿತ್ತು. ಈ  ಎರಡೂ ಪ್ರಕರಣಗಳನ್ನು ವಿಶ್ಲೇಷಿಸಿರುವ ತಜ್ಞರು ಭವಿಷ್ಯದಲ್ಲಿ ಇದಕ್ಕಿಂತಲೂ ಹೆಚ್ಚಿನ ಪ್ರಮಾಣದ ಭೂಕಂಪನದ ಸಂಭವವಿದೆ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

ಪ್ರಧಾನಿ ಮೋದಿ ಇಸ್ರೇಲ್ ಭೇಟಿಗೂ: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಷಡ್ಭುಜ ಕೂಟ ಘೋಷಿಸಿದ ನೆತನ್ಯಾಹು!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

SCROLL FOR NEXT