ಉತ್ತರ ಮತ್ತು ಈಶಾನ್ಯ ಭಾರತದಲ್ಲಿ ಭಾರಿ ಭೂಕಂಪ ಸಾಧ್ಯತೆ (ಸಂಗ್ರಹ ಚಿತ್ರ) 
ದೇಶ

ಉತ್ತರ ಮತ್ತು ಈಶಾನ್ಯ ಭಾರತದಲ್ಲಿ ಭಾರಿ ಭೂಕಂಪ ಸಾಧ್ಯತೆ..!

ಉತ್ತರ ಭಾರತ ಮತ್ತು ಈಶಾನ್ಯ ಭಾರತದಲ್ಲಿ ಭಾರಿ ಭೂಕಂಪನ ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ...

ನವದೆಹಲಿ: ಉತ್ತರ ಭಾರತ ಮತ್ತು ಈಶಾನ್ಯ ಭಾರತದಲ್ಲಿ ಭಾರಿ ಭೂಕಂಪನ ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಕೇಂದ್ರದ ಗೃಹ ಇಲಾಖೆಗೆ ಕೇಂದ್ರ ಹವಾಮಾನ ಇಲಾಖೆ ನೀಡಿರುವ ಮಾಹಿತಿಯನ್ವಯ ಈಶಾನ್ಯ ಭಾರತ ಮತ್ತು ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಶೇ.8.0 ಅಥವಾ ಅದಕ್ಕಿಂತಲೂ ಹೆಚ್ಚಿನ  ಪ್ರಮಾಣದ ಭೂಕಂಪನ ಸಂಭವಿಸುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ. ಪತ್ರಿಕೆಯ ವರದಿಯಲ್ಲಿ ಈಶಾನ್ಯ ಭಾರತದ ಹಿಮಾಲಯ ಪರ್ವತ ಶ್ರೇಣಿಯ  ರಾಜ್ಯಗಳು ಭೂಕಂಪನದ ಹೊಡೆತಕ್ಕೆ ಸಿಲುಕಲಿವೆ ಎಂದು ಎಚ್ಚರಿಕೆ ನೀಡಲಾಗಿದೆ.

ಇನ್ನು ವರದಿಯಲ್ಲಿ ಮಣಿಪುರ ರಾಜ್ಯ ಅತಿ ಹೆಚ್ಚು ಹಾನಿಗೊಳಗಾಗುವ ರಾಜ್ಯಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ ಎಂದು ವರದಿ ಹೇಳಿದೆ. ಸೋಮವಾರವಷ್ಟೇ ಈಶಾನ್ಯ ಭಾರತದ ಕೆಲ  ಪ್ರದೇಶಗಳಲ್ಲಿ ಭೂಕಂಪನ ಸಂಭವಿಸಿತ್ತು. ಇದರ ವರದಿಯನ್ನು ವಿಶ್ಲೇಷಿಸಿರುವ ಹವಾಮಾನ ಇಲಾಖೆಯ ತಜ್ಞರು ಸದ್ಯದಲ್ಲಿಯೇ ಉತ್ತರ ಭಾರತ ಮತ್ತು ಈಶಾನ್ಯ ಭಾರತದಲ್ಲಿ ಭಾರಿ  ಪ್ರಮಾಣದ ಭೂಕಂಪನ ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.

ಕಳೆದ ವರ್ಷ ಮೇ ತಿಂಗಳಿನಲ್ಲಿ ನೇಪಾಳದಲ್ಲಿ 7.3 ತೀವ್ರತೆ ಭೂಕಂಪನ ಸಂಭವಿಸಿತ್ತು. ಇದಾದ ಬಳಿಕ ಜನವರಿ 2016ರಲ್ಲಿ ಮಣಿಪುರದಲ್ಲಿ 6.7 ತೀವ್ರತೆಯ ಭೂಕಂಪನ ಸಂಭವಿಸಿತ್ತು. ಈ  ಎರಡೂ ಪ್ರಕರಣಗಳನ್ನು ವಿಶ್ಲೇಷಿಸಿರುವ ತಜ್ಞರು ಭವಿಷ್ಯದಲ್ಲಿ ಇದಕ್ಕಿಂತಲೂ ಹೆಚ್ಚಿನ ಪ್ರಮಾಣದ ಭೂಕಂಪನದ ಸಂಭವವಿದೆ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

SCROLL FOR NEXT