ಸಾಂದರ್ಭಿಕ ಚಿತ್ರ 
ದೇಶ

ಉತ್ತರ, ಈಶಾನ್ಯ ಭಾರತದಲ್ಲಿ ಪ್ರಬಲ ಭೂಕಂಪದ ಎಚ್ಚರಿಕೆ ನೀಡಿದ ಗೃಹ ಇಲಾಖೆ

ಉತ್ತರ ಹಾಗೂ ಈಶಾನ್ಯ ಭಾರತದಲ್ಲಿ ಪ್ರಬಲ ಭೂಕಂಪ ಸಂಭವಿಸುವ ಸಾಧ್ಯತೆ ಇದೆ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ನೈಸರ್ಗಿಕ ಪ್ರಕೋಪ...

ನವದೆಹಲಿ: ಉತ್ತರ ಹಾಗೂ ಈಶಾನ್ಯ ಭಾರತದಲ್ಲಿ ಪ್ರಬಲ ಭೂಕಂಪ ಸಂಭವಿಸುವ ಸಾಧ್ಯತೆ ಇದೆ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ನೈಸರ್ಗಿಕ ಪ್ರಕೋಪ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಹಿಮಾಲಯ ಸೇರಿದಂತೆ ಉತ್ತರ ಭಾರತ ಹಾಗೂ ಈಶಾನ್ಯ ರಾಜ್ಯಗಳಲ್ಲಿ ರಿಕ್ಟರ್ ಮಾಪಕದಲ್ಲಿ 8.0ರಷ್ಟು ತೀವ್ರತೆಯ ಪ್ರಬಲ ಭೂಕಂಪ ಸಂಭವಿಸುವ ಸಾಧ್ಯತೆ ಇದೆ ಎಂದು ಗೃಹ ಸಚಿವಾಲಯದ ನೈಸರ್ಗಿಕ ಪ್ರಕೋಪ ತಜ್ಞರು ಎಚ್ಚರಿಸಿರುವುದಾಗಿ ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.
ಕಳೆದ ಸೋಮವಾರ ಮಣಿಪುರದಲ್ಲಿ 6.7 ತೀವ್ರತೆಯ ಭೂಕಂಪ ಸಂಭವಿಸಿದ್ದು, ಭವಿಷ್ಯದಲ್ಲಿ ಇನ್ನೂ ತೀವ್ರತಮ ಭೂಕಂಪ ಸಂಭವಿಸುವ ಸೂಚನೆಯನ್ನು ನೀಡಿದೆ. ಇಡೀ ಉತ್ತರ ಹಾಗೂ ಈಶಾನ್ಯ ಭಾರತದಲ್ಲಿ 8 ರಷ್ಟು ತೀವ್ರತೆಯ ಭೂಕಂಪವು ಸದ್ಯದಲ್ಲೇ ಸಂಭವಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
2016ರ ಜನವರಿಯಲ್ಲಿ ಸಂಭವಿಸಿರುವ ಮಣಿಪುರ ಭೂಕಂಪ (6.7 ಅಂಕಗಳ ತೀವ್ರತೆ), ನೇಪಾಲ ಭೂಕಂಪ (2015 ಮೇ - 7.3 ಅಂಕ) ಮತ್ತು ಸಿಕ್ಕಿಂ ಭೂಕಂಪ (2011 - 6.9 ತೀವ್ರತೆ)ದಿಂದಾಗಿ ಹಿಮಾಲಯನ್‌ ಪ್ರಾಂತ್ಯದಲ್ಲಿ ನ ಭೂಗರ್ಭದಲ್ಲಿ ಟೆಕ್ಟಾನಿಕ್‌ ಪ್ಲೇಟ್‌ಗಳ ಘರ್ಷಣೆ ತೀವ್ರಗೊಂಡಿದೆ ಎಂದು ವರದಿ ತಿಳಿಸಿದೆ.
ಒಂದೊಮ್ಮೆ 8ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದ್ದೇ ಆದರೆ ಬಹುದೊಡ್ಡ ಪ್ರಮಾಣದ ಜೀವ ಹಾನಿ ಹಾಗೂ ನಷ್ಟ ಸಂಭವಿಸಲಿದೆ ಎಂದು ವರದಿ ಎಚ್ಚರಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಾಡಿಗೆದಾರರಿಗೆ ಸಿಹಿ ಸುದ್ದಿ: ಕರ್ನಾಟಕ 'ಬಾಡಿಗೆ ತಿದ್ದುಪಡಿ ವಿಧೇಯಕ' 2025 ವಿಧಾನಸಭೆಯಲ್ಲಿ ಮಂಡನೆ!

ವಿಧಾನಸಭೆಯಲ್ಲಿ 'ಸಿಎಂ ಕುರ್ಚಿ ಕದನ' ಸದ್ದು: ಆರ್. ಅಶೋಕ್ ಮಾತಿಗೆ ಕೆರಳಿದ ಬೈರತಿ; ತೀವ್ರ ಮಾತಿನ ಚಕಮಕಿ!

EVMs ಅಲ್ಲವೇ ಅಲ್ಲ, ಪ್ರಧಾನಿ ಮೋದಿ ಇದನ್ನೇ 'ಹ್ಯಾಕ್' ಮಾಡಿದ್ದಾರೆ! ಲೋಕಸಭೆಯಲ್ಲಿ ಕಂಗನಾ

ಸರ್ಕಾರದ ವಿರುದ್ಧ ಹೋರಾಡಿ ಗೆದ್ದ ಅಲೋಕ್ ಕುಮಾರ್​​ಗೆ DGP ಆಗಿ ಮುಂಬಡ್ತಿ: ADGP ಬಿ.ದಯಾನಂದ್ ವರ್ಗಾವಣೆ

25 ವರ್ಷ ವಯಸ್ಸಿನ ಅವಿವಾಹಿತ ಮಹಿಳೆಯರು..: ಅನಿರುದ್ಧಾಚಾರ್ಯ ವಿರುದ್ಧ ಕೇಸ್ ದಾಖಲು! 'ಪೂಕಿ ಬಾಬಾ' ಹೇಳಿದ್ದೇನು ಗೊತ್ತಾ?

SCROLL FOR NEXT