ಜಮ್ಮು-ಕಾಶ್ಮೀರ ಪಿಡಿಪಿ ಅಧ್ಯಕ್ಷೆ ಮೆಹಬೂಬ ಮುಫ್ತಿ 
ದೇಶ

ಮೆಹಬೂಬ ಮುಫ್ತಿ ಜಮ್ಮು-ಕಾಶ್ಮೀರದ ನೂತನ ಮುಖ್ಯಮಂತ್ರಿ?

ಜಮ್ಮು-ಕಾಶ್ಮೀರದ ಮಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ನಿಧನದಿಂದಾಗಿ ಅವರ ಮಗಳು ಮೆಹಬೂಬ ಮುಫ್ತಿ ಅವರು...

ಶ್ರೀನಗರ: ಜಮ್ಮು-ಕಾಶ್ಮೀರದ ಮಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ನಿಧನದಿಂದಾಗಿ ಅವರ ಮಗಳು ಮೆಹಬೂಬ ಮುಫ್ತಿ ಅವರು ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಜಮ್ಮು-ಕಾಶ್ಮೀರ ರಾಜ್ಯದ ಮೊದಲ ಮಹಿಳಾ ಮುಖ್ಯಮಂತ್ರಿ ಎಂಬ ಹಿರಿಮೆಗೆ ಮೆಹಬೂಬ ಮುಫ್ತಿ ಪಾತ್ರರಾಗಿದ್ದಾರೆ.

ಜಮ್ಮು-ಕಾಶ್ಮೀರದ ಪಿಡಿಪಿ ಅವಿರೋಧವಾಗಿ ಮೆಹಬೂಬ ಅವರನ್ನು ಆಯ್ಕೆ ಮಾಡುವ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲಾಗಿದೆ ಎಂದು ಪಿಡಿಪಿ ಹಿರಿಯ ನಾಯಕ ಹಾಗೂ ಲೋಕಸಭಾ ಸದಸ್ಯ ಮುಝಾಫರ್ ಹುಸೇನ್ ಬೇಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಮೆಹಬೂಬ ಅವರು ಮುಖ್ಯಮಂತ್ರಿಯಾಗುವುದಕ್ಕೆ ಸರ್ಕಾರದಲ್ಲಿ ಮೈತ್ರಿಪಕ್ಷವಾಗಿರುವ ಬಿಜೆಪಿಯ ಒಪ್ಪಿಗೆ ಪಡೆಯಬೇಕಾಗಿದೆ.

ಬಿಜಪಿಯಿಂದ ಇದುವರೆಗೆ ಯಾವುದೇ ವಿರೋಧ ಕೇಳಿಬಂದಿಲ್ಲದಿದ್ದರೂ ಪಕ್ಷದ ಹೈಕಮಾಂಡ್ ನಿಂದ ಅಂತಿಮ ತೀರ್ಮಾನ ಬರಬೇಕಾಗಿದೆ. ಜಮ್ಮು-ಕಾಶ್ಮೀರ ವಿಧಾನಸಭೆಯ 87 ಮಂದಿ ಸದಸ್ಯರಲ್ಲಿ ಪಿಡಿಪಿ 28 ಸ್ಥಾನಗಳನ್ನು ಹೊಂದಿದೆ. ಬಿಜೆಪಿ 25, ವಿರೋಧ ಪಕ್ಷವಾದ ರಾಷ್ಟ್ರೀಯ ಕಾಂಗ್ರೆಸ್ 15 ಮತ್ತು ಕಾಂಗ್ರೆಸ್ 12 ಸ್ಥಾನಗಳನ್ನು ಹೊಂದಿವೆ.

ಕಳೆದ ವರ್ಷ ಪಿಡಿಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕೆ, ಬೇಡವೇ ಎಂದು ನಿರ್ಧರಿಸಲು ಬಿಜೆಪಿ ತುಂಬಾ ಸಮಯ ತೆಗೆದುಕೊಂಡಿತ್ತು. ಆದರೆ ಈ ಬಾರಿ ಹಾಗಾಗುವುದಿಲ್ಲ. ಇದೇ ತಿಂದಳು 18ರಿಂದ ಬಜೆಟ್ ಅಧಿವೇಶನ ನಡೆಯಲಿರುವುದರಿಂದ ಆದಷ್ಟು ಶೀಘ್ರವೇ ತೀರ್ಮಾನ ತೆಗೆದುಕೊಳ್ಳಬೇಕಾಗಿದೆ.

ಅತ್ಯಂತ ಸಿಟ್ಟಿನ ರಾಜಕಾರಣಿ ಎಂಬ ಭಾವನೆ ಬೆಳೆಸಿಕೊಂಡಿರುವ ಮೆಹಬೂಬ   1996ರಲ್ಲಿ ಕಾಂಗ್ರೆಸ್ ಪಕ್ಷ ಸೇರಿ ತಮ್ಮ ತಂದೆಯವರ ಜತೆ ರಾಜಕೀಯ ಜೀವನ ಆರಂಭಿಸಿದ್ದರು. 56 ವರ್ಷದ ಮೆಹಬೂಬ ಇಬ್ಬರು ಹೆಣ್ಣು ಮಕ್ಕಳ ತಾಯಿಯಾಗಿದ್ದು, ಪಿಡಿಪಿಯ ಅಧ್ಯಕ್ಷೆ. ಅವರು ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ತಮ್ಮ ತವರು ಕ್ಷೇತ್ರ ಬಿಜ್ ಬೆಹಾರದಿಂದ ಸ್ಪರ್ಧಿಸಿ ವಿಧಾನಸಭೆ ಪ್ರವೇಶಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT