ದೇಶ

ನಕ್ಸಲರಿಂದ ನೆಲ ಬಾಂಬ್ ಸ್ಫೋಟ: ಬಿಎಸ್‌ಎಫ್ ಅಧಿಕಾರಿ, ಜವಾನ ಸಾವು

Lingaraj Badiger
ಭುವನೇಶ್ವರ: ಒಡಿಶಾದ ಕೊರಪುಟ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಗಸ್ತು ತಿರುಗುತ್ತಿದ್ದ ವೇಳೆ ನಕ್ಸಲರು ನೆಲ ಬಾಂಬ್ ಸ್ಫೋಟಿಸಿದ್ದು, ಘಟನೆಯಲ್ಲಿ ಓರ್ವ ಬಿಎಸ್‌ಎಫ್ ಅಧಿಕಾರಿ ಹಾಗೂ ಓರ್ವ ಜವಾನ ಮೃತಪಟ್ಟಿದ್ದಾರೆ.
ಇಂದು ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಬೈಕ್‌ನಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಘಟನೆ ನಡೆದಿದ್ದು, ಬೈಕ್ ಚಾಲನೆ ಮಾಡುತ್ತಿದ್ದ ಪೇದೆ ಎ.ಪಿ.ಪಾಂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡಿದ್ದ ಅದೇ ಬೈಕ್‌ನಲ್ಲಿ ಹಿಂದೆ ಕುಳಿತಿದ್ದ ಡೆಪ್ಯೂಟಿ ಕಮಾಂಡೆಂಟ್ ಸುನಿಲ್ ಕುಮಾರ್ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ನಕ್ಸಲರು ರಸ್ತೆಯ ಕೆಳಗೆ ಐಇಡಿ ಸ್ಫೋಟಕವನ್ನಿಟ್ಟು ಸ್ಫೋಟಿಸಿದ್ದಾರೆ. ಸ್ಫೋಟದ ತೀವ್ರತೆಗೆ ಬೈಕ್ ಸಂಪೂರ್ಣ ಛಿದ್ರ ಛಿದ್ರವಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
SCROLL FOR NEXT