ಛೋಟಾ ರಾಜನ್ 
ದೇಶ

ಭಾರತ ಸರ್ಕಾರದ ಜೊತೆ ಛೋಟಾ ರಾಜನ್ ವಿಶೇಷ ಸಂಬಂಧ ಹೊಂದಿದ್ದ

ಬಾಲಿ ಪೊಲೀಸರಿಂದ ಬಂಧಿತನಾಗಿ ಭಾರತಕ್ಕೆ ಗಡಿಪಾರಾಗಿ ತಿಹಾರ ಜೈಲಿನಲ್ಲಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹಚರ ಛೋಟಾ ರಾಜನ್ ಭಾರತ ಸರ್ಕಾರದ ಜೊತೆ ವಿಶೇಷ ಸಂಬಂಧ

ನವದೆಹಲಿ: ಬಾಲಿ ಪೊಲೀಸರಿಂದ ಬಂಧಿತನಾಗಿ ಭಾರತಕ್ಕೆ ಗಡಿಪಾರಾಗಿ ತಿಹಾರ ಜೈಲಿನಲ್ಲಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹಚರ ಛೋಟಾ ರಾಜನ್ ಭಾರತ ಸರ್ಕಾರದ ಜೊತೆ ವಿಶೇಷ ಸಂಬಂಧ ಹೊಂದಿದ್ದ ಎಂದು ನಿವೃತ್ತ  ದೆಹಲಿ ಪೊಲೀಸ್ ಕಮಿಷನರ್ ನೀರಜ್ ಕುಮಾರ್ ಹೇಳಿದ್ದಾರೆ.

ದೆಹಲಿಯಲ್ಲಿ ನಡೆದ ಸಾಹಿತ್ಯ ಹಬ್ಬದಲ್ಲಿ ಪತ್ರಕರ್ತರ ಪ್ರಶ್ನೆಗೆ ಈ ರೀತಿಯಾಗಿ ಉತ್ತರಿಸಿದ್ದಾರೆ. 1993 ರ ಮುಂಬೈ ಸ್ಫೋಟದ ನಂತರ ಛೋಟಾ ರಾಜನ್ ಮೂರು ಬಾರಿ ತಾವು ದೂರವಾಣಿಯಲ್ಲಿ ಸಂಭಾಷಣೆ ನಡೆಸಿರುವುದಾಗಿ ನೀರಜ್ ಕುಮಾರ್ ಹೇಳಿಕೊಂಡಿದ್ದಾರೆ.

1990 ರಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪೊಲೀಸರಿಗೆ ಶರಣಾಗಲು ಬಯಸಿದ್ದ ಎಂದು ನೀರಜ್ ಕುಮಾರ್ ಕಳೆದ ವರ್ಷ ಬಿಡುಗಡೆ ಮಾಡಿದ ತಮ್ಮ ಪುಸ್ತಕದಲ್ಲಿ ಬರೆದಿದ್ದಾರೆ.

ಛೋಟಾ ರಾಜನ್ ನಿಂದ ದಾವೂದ್ ಇಬ್ರಾಹಿಂ ನನ್ನು ಕರೆತರಲು ಸಹಾಯ ಮಾಡುತ್ತಾನೆ ಎಂಬ ಆಶಯ ಹೊಂದಬಾರದು ಎಂದು ನೀರಜ್ ಕುಮಾರ್ ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT