ಕೇಂದ್ರ ಸಚಿವ ಅರುಣ್ ಜೇಟ್ಲಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (ಸಂಗ್ರಹ ಚಿತ್ರ) 
ದೇಶ

ಜೈಲಿಗೆ ಹೋಗಲು ಸಿದ್ಧರಾಗಿ: ಕೇಜ್ರಿವಾಲ್ ಗೆ ಬಿಜೆಪಿ

ಅರುಣ್ ಜೇಟ್ಲಿ ಅವರ ವಿರುದ್ಧ ಇಲ್ಲ ಸಲ್ಲದ ಆರೋಪ ಹೊರಿಸಿರುವ ಅರವಿಂದ್ ಕೇಜ್ರಿವಾಲ್ ಅವರೇ ಜೈಲಿಗೆ ಹೋಗಲು ಸಿದ್ಧರಾಗಿ ಎಂದು ಬಿಜೆಪಿ ಹೇಳಿದೆ...

ನವದೆಹಲಿ: ಅರುಣ್ ಜೇಟ್ಲಿ ಅವರ ವಿರುದ್ಧ ಇಲ್ಲ ಸಲ್ಲದ ಆರೋಪ ಹೊರಿಸಿರುವ ಅರವಿಂದ್ ಕೇಜ್ರಿವಾಲ್ ಅವರೇ ಜೈಲಿಗೆ ಹೋಗಲು ಸಿದ್ಧರಾಗಿ ಎಂದು ಬಿಜೆಪಿ ಹೇಳಿದೆ.

ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಒಂದಾದರ ಮೇಲೊಂದು ಅಸವಿಂಧಾನಿಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಆಡಳಿತ ನಿಯಂತ್ರಣದಲ್ಲಿ ಕೇಜ್ರಿವಾಲ್ ಸಂಪೂರ್ಣ  ವಿಫಲರಾಗಿದ್ದಾರೆ. ಇನ್ನು ಕೇಂದ್ರ ಸಚಿವ ಮತ್ತು ಬಿಜೆಪಿ ಮುಖಂಡ ಅರುಣ್ ಜೇಟ್ಲಿ ಅವರ ವಿರುದ್ಧ ಭ್ರಷ್ಟಾಚಾರ ಪ್ರಕರಣದಲ್ಲಿ ಹೆಸರಿಸಿದ್ದ ಕೇಜ್ರಿವಾಲ್ ಅವರು ಅದನ್ನು ಸಾಬೀತು  ಪಡಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಖಂಡಿತಾ ಕೇಜ್ರಿವಾಲ್ ಅವರು ಜೈಲಿಗೆ ಹೋಗಲಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.

ಈ ಬಗ್ಗೆ ದೆಹಲಿಯಲ್ಲಿ ಶನಿವಾರ ಮಾತನಾಡಿರುವ ಬಿಜೆಪಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿಯಾದ ಶ್ರೀಕಾಂತ್ ಶರ್ಮಾ ಅವರು, "ಆಡಳಿತಾತ್ಮಕವಾಗಿ ದೆಹಲಿ ಸರ್ಕಾರ ವಿಫಲವಾಗಿದ್ದು,  ಇದನ್ನು ಜನರಿಂದ ಮರೆಮಾಚಲು ಅರುಣ್ ಜೇಟ್ಲಿ ಅವರ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡಿತ್ತು. ಇದೀಗ ಆಪ್ ಮುಖಂಡರ ಬಣ್ಣ ಬಯಲಾಗಿದ್ದು, ಕೇಜ್ರಿವಾಲ್ ಮತ್ತು ಅವರ  ಸಂಗಡಿಗರು ಜೈಲಿಗೆ ಹೋಗಲು ಸಿದ್ಧರಾಗಬೇಕಿದೆ" ಎಂದು ಹೇಳಿದರು.

ದೆಹಲಿ ಕ್ರಿಕೆಟ್ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಸಂಬಂಧ ಕೇಂದ್ರ ಸಚಿವ ಅರುಣ್ ಜೇಟ್ಲಿ ವಿರುದ್ಧ ಆಮ್ ಆದ್ಮಿ ಪಕ್ಷ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು  ಹೊರಿಸಿದ್ದ ಆರೋಪಕ್ಕೆ ತಿರುಗೇಟು ನೀಡಿದ್ದ ಜೇಟ್ಲಿ ಅವರು, ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಕಳೆದ ವಾರವಷ್ಟೇ ಕೋರ್ಟ್ ಈ ಪ್ರಕರಣವನ್ನು  ವಿಚಾರಣೆಗೆ ತೆಗೆದುಕೊಂಡಿತ್ತು. ಇನ್ನು ಮಹತ್ವದ ಬೆಳವಣಿಗೆಯೊಂದರಲ್ಲಿ ಡಿಡಿಸಿಎ ಭ್ರಷ್ಟಾಚಾರ ಪ್ರಕರಣವನ್ನು ತನಿಖೆ ನಡೆಸಲು ದೆಹಲಿ ಸರ್ಕಾರ ನಿಯೋಜಿಸಿದ್ದ ಸಮಿತಿಯ ಮೊದಲ  ವರದಿ ಹೊರಬಿದ್ದಿದ್ದು, ವರದಿಯಲ್ಲಿ ಅರುಣ್ ಜೇಟ್ಲಿ ಅವರ ಹೆಸರೇ ನಮೂದಾಗಿಲ್ಲ. ಇದು ದೆಹಲಿ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗುವಂತೆ ಮಾಡಿದೆ.

ಹೀಗಾಗಿ ದೆಹಲಿ ಸರ್ಕಾರ ಮತ್ತು ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಮುಂದುವರೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

SCROLL FOR NEXT