ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ (ಸಂಗ್ರಹ ಚಿತ್ರ) 
ದೇಶ

ರಾಮ ದೇಗುಲ ವಿಚಾರ ಚುನಾವಣಾ ಅಸ್ತ್ರವಲ್ಲ: ಸುಬ್ರಹ್ಮಣ್ಯನ್ ಸ್ವಾಮಿ

ವಿವಾದಿತ ಆಯೋಧ್ಯೆ ರಾಮ ದೇಗುಲ ವಿಚಾರವನ್ನು ಚುನಾವಣಾ ಅಸ್ತ್ರವಾಗಿ ನೋಡಬಾರದು ಎಂದು ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಅವರು ಶನಿವಾರ ಹೇಳಿದ್ದಾರೆ...

ನವದೆಹಲಿ: ವಿವಾದಿತ ಆಯೋಧ್ಯೆ ರಾಮ ದೇಗುಲ ವಿಚಾರವನ್ನು ಚುನಾವಣಾ ಅಸ್ತ್ರವಾಗಿ ನೋಡಬಾರದು ಎಂದು ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಅವರು ಶನಿವಾರ ಹೇಳಿದ್ದಾರೆ.

ದೆಹಲಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಮ ಮಂದಿರ ನಿರ್ಮಾಣ ವಿಚಾರಣ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿರುವ ಅವರು, ಆಯೋಧ್ಯೆ ರಾಮ ದೇಗುಲ ವಿಚಾರವನ್ನು ಚುನಾವಣಾ ಅಸ್ತ್ರವೆಂಬ ದೃಷ್ಟಿಯಲ್ಲಿ ನೋಡಬಾರದು. ರಾಮ ಮಂದಿರ ಈ ವರ್ಷದಲ್ಲಿ ನಿರ್ಮಾಣವಾಗದಿದ್ದರೆ, ಮುಂದಿನ ದಿನಗಳಲ್ಲಿ ನಿರ್ಮಾಣ ಮಾಡಲಾಗುತ್ತದೆ. ಆಗಲೂ ಚುನಾವಣೆ ಬರುತ್ತದೆ. ಚುನಾವಣೆ ಇದ್ದ ಕಾರಣ ದೇಗುಲ ನಿರ್ಮಾಣವಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತದೆ. ಚುನಾವಣಾ ಪ್ರಕ್ರಿಯೆಗಳು ಅದರ ಪಾಡಿಗೆ ಹೋಗುತ್ತಿರುತ್ತದೆ. ನಾನು ನಮ್ಮ ಕೆಲಸಗಳನ್ನು ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಜನರು ಅತೀ ಸೂಕ್ಷ್ಮತೆಯುಳ್ಳವರಾಗಿದ್ದು, ಅವರಿಗೆ ಚುನಾವಣಾ ಅಸ್ತ್ರಯಾವುದು, ಯಾವುದು ಅಲ್ಲ ಎಂಬುದರ ಬಗ್ಗೆ ಅವರಿಗೆ ಅರಿವಿರುತ್ತದೆ. ಶೇ.99 ರಷ್ಟು ಹಿಂದೂಗಳು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕೆಂದು ಬಯಸುತ್ತಿದ್ದಾರೆ. ಇದಕ್ಕೆ ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರು ವಿರೋಧ ವ್ಯಕ್ತಪಡಿಸುತ್ತಿಲ್ಲ. ನಾವು ಯಾರ ವಿರುದ್ಧವೂ ಅಲ್ಲ ಎಂಬುದು ಅವರಿಗೂ ತಿಳಿದಿದೆ. ರಾಮ ದೇಗುಲ ನಿರ್ಮಾಣಕ್ಕೆ ಯಾವುದೇ ತೊಂದರೆಗಳಿಲ್ಲ ಎಂದು ಹೇಳಿದ್ದಾರೆ.

ಸುಬ್ರಹ್ಮಣ್ಯನ್ ಸ್ವಾಮಿ ಅವರು ಇತ್ತ ವಿಚಾರ ಸಂಕಿರಣದಲ್ಲಿ ರಾಮ ದೇಗುಲ ನಿರ್ಮಾಣ ಕುರಿತಂತೆ ಮಾತನಾಡುತ್ತಿದ್ದರೆ, ವಿಶ್ವ ವಿದ್ಯಾಲಯದ ಹೊರಾಂಗಣದಲ್ಲಿ ವಿದ್ಯಾರ್ಥಿಗಳ ಸಂಘಟನೆಗಳಾದ ಎನ್ಎಸ್ ಯುಐ, ಎಐಎಸ್ಎ ಮತ್ತು ಕೆವೈಎಸ್ ಪ್ರತಿಭಟನೆ ನಡೆಸುತ್ತಿವೆ.

ಈ ಹಿಂದೆ ಸುಬ್ರಹ್ಮಣ್ಯನ್ ಸ್ವಾಮಿ ಅವರು, ಅಯೋಧ್ಯಯಲ್ಲಿ ರಾಮ ದೇಗುಲವನ್ನು 2016ರಲ್ಲಿ ಮುಸ್ಲಿಂ ಸಮುದಾಯಗಳ ಸಹಕಾರದೊಂದಿಗೆ ನಿರ್ಮಾಣ ಮಾಡಲಾಗುತ್ತದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT