ಪೊಲೀಸ್ 
ದೇಶ

ಬಿಹಾರದಲ್ಲಿ ಎಎಸ್ಸೈ, ಕಂಟ್ರಾಕ್ಟರ್ ಗುಂಡಿಟ್ಟು ಹತ್ಯೆ

ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಘಟನೆಯಲ್ಲಿ ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಎಎಸ್ಐ) ಮತ್ತು ಕಾಂಟ್ರಾ ಕ್ಟರ್ ಒಬ್ಬರನ್ನು ಗುಂಡು...

ಹಾಜಿಪುರ/ನವದೆಹಲಿ: ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಘಟನೆಯಲ್ಲಿ ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಎಎಸ್ಐ) ಮತ್ತು ಕಾಂಟ್ರಾ ಕ್ಟರ್ ಒಬ್ಬರನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಇದರಿಂದ ಕ್ರುದ್ಧಗೊಂಡಿರುವ ಕೇಂದ್ರ ಸಚಿವ ಮತ್ತು ಹಾಜಿಪುರ ಸಂಸದ ರಾಮ್ವಿ ಲಾಸ್ ಪಾಸ್ವಾನ್ ಬಿಹಾರದಲ್ಲಿ ಜಂಗಲ್ ರಾಜ್ ಮತ್ತೆ ಕಾಲಿರಿಸಿದೆ ಎಂದು ಟೀಕಿಸಿದ್ದಾರೆ. ಅಪರಿ ಚಿತರು ಎಎಸ್‍ಐಯನ್ನು ಹತ್ಯೆ ಮಾಡಿದ್ದಾರೆ. ಆದರೆ ಕಾರಣ ಗೊತ್ತಾಗಿಲ್ಲ ಎಂದು ವೈಶಾಲಿ ಜಿಲ್ಲಾ ಎಸ್ಪಿ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆ ಪ್ರಕಾರ ದೇಹದಲ್ಲಿ ನಾಲ್ಕು ಗುಂಡು ತಗಲಿವೆ. ಮತ್ತೊಂದು ಘಟನೆಯಲ್ಲಿ ಕಾಂಟ್ರಾಕ್ಟರ್ ಒಬ್ಬರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಈ ಕೃತ್ಯಕ್ಕೂ ಕಾರಣ ತಿಳಿದುಬಂದಿಲ್ಲ ಎಂದಿದ್ದಾರೆ ಪೊಲೀಸರು. ಮತ್ತೊಂದೆಡೆ ಹಾಜಿಪುರದಲ್ಲಿ ವೈದ್ಯರೊ ಬ್ಬರ ಮನೆಯಲ್ಲಿ 12 ಸುತ್ತುಗಳಷ್ಟು ಗುಂಡು ಹಾರಾಟ ನಡೆಸಲಾಗಿದೆ. ಈ ಘಟನೆಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ 'ಬಿಹಾರದಲ್ಲಿ ಜಂಗಲ್ ರಾಜ್ ಹಿಂತಿರುಗಿದೆ. ಈ ಬಗ್ಗೆ ಮುಖ್ಯಮಂತ್ರಿ ನಿತೀಶ್ಕುಮಾರ್ ಅಸಹಾಯಕರಾಗಿದ್ದಾರೆ. ವೈಶಾಲಿ ಜಿಲ್ಲೆಯಿಂದ ಡಿಸಿಎಂ ಸೇರಿದಂತೆ ಮೂವರು ಸಚಿವರು ಸಂಪುಟದಲ್ಲಿದ್ದಾರೆ. ಹೀಗಿದ್ದರೂ ಇಂಥ ಘಟನೆಗಳು ನಡೆಯುತ್ತಿವೆ'' ಟೀಕಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT