ಗುಲಾಂ ಅಲಿ 
ದೇಶ

ಕೇರಳದಲ್ಲಿ ಗುಲಾಂ ಅಲಿ ಸಂಗೀತ ಕಾರ್ಯಕ್ರಮ ನಡೆಸಲು ಬಿಡುವುದಿಲ್ಲ

ಪಠಾಣ್‌ಕೋಟ್ ಉಗ್ರದಾಳಿ ಹಿನ್ನಲೆಯಲ್ಲಿ ಪಾಕಿಸ್ತಾನಿ ಗಾಯಕ ಗುಲಾಂ ಅಲಿ ಅವರು ಕೇರಳದಲ್ಲಿ ನಡೆಸಲುದ್ದೇಶಿಸುತ್ತಿರುವ ಗಜಲ್ ಸಂಗೀತ ...

ತಿರುವನಂತಪುರಂ: ಪಠಾಣ್‌ಕೋಟ್ ಉಗ್ರದಾಳಿ ಹಿನ್ನಲೆಯಲ್ಲಿ ಪಾಕಿಸ್ತಾನಿ ಗಾಯಕ ಗುಲಾಂ ಅಲಿ ಅವರು ಕೇರಳದಲ್ಲಿ ನಡೆಸಲುದ್ದೇಶಿಸುತ್ತಿರುವ ಗಜಲ್ ಸಂಗೀತ ಕಾರ್ಯಕ್ರಮವನ್ನು ರದ್ದುಗೊಳಿಸಲು ಶಿವಸೇನೆ ಆದೇಶಿಸಿದೆ. 
ಜನವರಿ 14 ಕ್ಕೆ ಕೇರಳದ ರಾಜಧಾನಿ ತಿರುವನಂತಪುರಂನಲ್ಲಿ ಮತ್ತು 17 ರಂದು ಕೋಝಿಕ್ಕೋಡ್‌ನಲ್ಲಿಯೂ ಗುಲಾಂ ಅಲಿ ಕಾರ್ಯಕ್ರಮ ನಿಗದಿಯಾಗಿದೆ. ಒಂದು ವೇಳೆ ಕಾರ್ಯಕ್ರಮ ನಡೆದರೆ, ಕಾರ್ಯಕ್ರಮದ ವೇಳೆ ನಮ್ಮ ಕಾರ್ಯಕರ್ತರು ವೇದಿಕೆ ಮುಂದೆ ಪ್ರತಿಭಟನೆ ನಡೆಸುವುದಾಗಿ ಶಿವಸೇನೆ ಬೆದರಿಕೆ ನೀಡಿದೆ.
75ರ ಹರೆಯದ ಖ್ಯಾತ ಗಜಲ್ ಗಾಯಕ ಗುಲಾಂ ಅಲಿ ಜನವರಿ 14 ರಂದು ಕೇರಳಕ್ಕೆ ಆಗಮಿಸಲಿದ್ದಾರೆ. ಕೇರಳದ ಸಾಮಾಜಿಕ ಸಾಂಸ್ಕೃತಿಕ ಸಂಘಟನೆಯಾದ ಸ್ವರಲಯ ಗುಲಾಂ ಗಜಲ್ ಕಾರ್ಯಕ್ರಮದ ಆಯೋಜಕರಾಗಿದ್ದಾರೆ.
ಪಠಾಣ್‌ಕೋಟ್ ವಾಯುನೆಲೆಯ ಮೇಲೆ ಉಗ್ರ ದಾಳಿಯಾಗಿ ದೇಶಕ್ಕೆ ದೇಶವೇ ಸೂಕತದ ಛಾಯೆಯಲ್ಲಿರುವಾಗ ಸಂಗೀತ ಕಾರ್ಯಕ್ರಮ ನಡೆಸುವುದು ಸರಿಯಲ್ಲ ಎಂದು ಶಿವಸೇನೆಯ ರಾಜ್ಯ ಸಂಘಟನೆಯ ಸದಸ್ಯ ಪಿ. ಅಜಿ ಹೇಳಿದ್ದಾರೆ.
ನಾವು ಕಲೆ ವಿರುದ್ಧವಲ್ಲ, ನಾವು ಪಾಕಿಸ್ತಾನದ ವಿರುದ್ಧ ಈ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಅಜಿ ಹೇಳಿದ್ದಾರೆ.
ಅದೇ ವೇಳೆ ಅಲಿ ಅವರನ್ನು ಸ್ವಾಗತಿಸಲು ಕಾರ್ಯಕ್ರಮ ಹಮ್ಮಿಕೊಳ್ಳುವ ಬದಲು ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ, ಉಗ್ರ ದಾಳಿಯಲ್ಲಿ ಮಡಿದ ಹುತಾತ್ಮರಿಗೆ ಗೌರವ ಸಲ್ಲಿಸಲಿ ಎಂದು ಶಿವಸೇನೆ ಸಲಹೆ ನೀಡಿದೆ. 
ಜನವರಿ 15 ಮತ್ತು 17 ರಂದು ಶಿವಸೇನೆ ಕೇರಳದಾದ್ಯಂತ ಪ್ರತಿಭಟನಾ ದಿನವನ್ನು ಆಚರಿಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT