ಲಾಹೋರ್ ನಲ್ಲಿ ಪಾಕ್ ಪ್ರಧಾನಿ ನವಾಜ್ ಷರೀಫ್ ಅವರನ್ನು ಭೇಟಿ ಮಾಡಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ(ಎಡಚಿತ್ರ), ಬಲಚಿತ್ರದಲ್ಲಿ ದಾವೂದ್ ಇಬ್ರಾಹಿಂ(ಸಂಗ್ರಹ ಚಿತ್ರ) 
ದೇಶ

ಪಾಕ್ ಗೆ ಮೋದಿ ತೆರಳಿದ ಬೆನ್ನಲ್ಲೇ ನವಾಜ್ ಷರೀಫ್ ಭೇಟಿ ಮಾಡಿದ್ದ ದಾವೂದ್ ಇಬ್ರಾಹಿಂ

ಉಗ್ರಗಾಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪಠಾಣ್ ಕೋಟ್ ವಾಯುನೆಲೆ ಮೇಲೆ ನಡೆದ ದಾಳಿ ನಂತರ...

ನವದೆಹಲಿ: ಉಗ್ರಗಾಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪಠಾಣ್ ಕೋಟ್ ವಾಯುನೆಲೆ ಮೇಲೆ ನಡೆದ ದಾಳಿ ನಂತರ ಪಾಕಿಸ್ತಾನ ಭಾರತಕ್ಕೆ ಭರವಸೆ ನೀಡಿದೆಯಾದರೂ ಪಾಕಿಸ್ತಾನದ ಇನ್ನೊಂದು ಮುಖ ಬದಲಾದಂತಿದೆ. ಮಾಧ್ಯಮಗಳಿಗೆ ಸಿಕ್ಕಿದ ವರದಿಯನ್ನು ನಂಬುವುದಾದರೆ ಪಾಕಿಸ್ತಾನದ ನಿಜವಾದ ಉದ್ದೇಶವೇನು ಎಂಬುದು ಗೊತ್ತಾಗುತ್ತದೆ.

 ಐಬಿಎನ್ 7 ಹಿಂದಿ ನ್ಯೂಸ್ ಚಾನೆಲ್ ಗೆ ಸಿಕ್ಕಿದ ಮಾಹಿತಿ ಪ್ರಕಾರ, ಭಾರತ ಸೆರೆಹಿಡಿಯಬೇಕಾಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ, ಪ್ರಧಾನಿ ನರೇಂದ್ರ ಮೋದಿಯವರು ಲಾಹೋರ್ ಗೆ ಅನಿರೀಕ್ಷಿತವಾಗಿ ಭೇಟಿ ನೀಡಿದ ಒಂದು ದಿನ ನಂತರ ನವಾಜ್ ಷರೀಫ್ ನನ್ನು ಭೇಟಿ ಮಾಡಿ ಆತಿಥ್ಯ ಸ್ವೀಕರಿಸಿದ್ದನಂತೆ. ನವಾಜ್ ಷರೀಫ್ ಅವರ ಹುಟ್ಟುಹಬ್ಬ ಮತ್ತು ಅವರ ಮೊಮ್ಮಗಳ ಮದುವೆ ದಿನ ಪ್ರಧಾನಿ ಮೋದಿಯವರು ಲಾಹೋರ್ ಗೆ ತೆರಳಿ ಷರೀಫ್ ಅವರನ್ನು ಭೇಟಿ ಮಾಡಿದ್ದರು.

ನರೇಂದ್ರ ಮೋದಿ ಅವರು ಡಿಸೆಂಬರ್ 25ರಂದು ಲಾಹೋರ್ ನಲ್ಲಿ ನವಾಜ್ ಷರೀಫ್ ಅವರನ್ನು ಭೇಟಿ ಮಾಡಿ ನೂತನ ವಧುವರರನ್ನು ಹರಸಿ, ಅವರಿಗೆ ಉಡುಗೊರೆ ನೀಡಿ ಭಾರತಕ್ಕೆ ಹಿಂತಿರುಗಿದ್ದರು. ನವಾಜ್ ಷರೀಫ್ ಅವರ ಅತಿಥಿಗಳ ಪಟ್ಟಿಯಲ್ಲಿ ಯಾರ್ಯಾರು ಇದ್ದಾರೆ ಎಂಬುದು ಅವರಿಗೆ ತಿಳಿದಿರಲಿಲ್ಲ.

ಮುಂಬೈ ಮೂಲದ ಹಿರಿಯ ಪತ್ರಕರ್ತ ಬಲ್ಜೀತ್ ಪರ್ಮರ್ ಅವರ ವರದಿಯನ್ನು ನಂಬುವುದಾದರೆ ಡಿಸೆಂಬರ್ 26ರಂದು ದಾವೂದ್ ಇಬ್ರಾಹಿಂ ಮತ್ತು ಅವನ ಇಡೀ ಕುಟುಂಬ ಲಾಹೋರ್ ನ ರೈವಿಂಡಿ ಅರಮನೆಯಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದೆ.ದಾವೂದ್ ಇಬ್ರಾಹಿಂ ಜೊತೆಗೆ ಭಾರತದ ಪ್ರಮುಖ ವಾಣಿಜ್ಯೋದ್ಯಮಿಯೊಬ್ಬರು ಮತ್ತು ಮುಂಬೈಯ ಕೆಲವು ಸ್ನೇಹಿತರು ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ಮದುವೆ ನಡೆಯುವುದಕ್ಕೆ ಕೆಲ ದಿನಗಳ ಮುನ್ನ ದಾವೂದ್ ಇಬ್ರಾಹಿಂ ತನ್ನ ಪ್ರಮುಖ ಸಹಚರ ಛೋಟಾ ಶಕೀಲ್ ಗೆ ಮಾಡಿದ ದೂರವಾಣಿ ಕರೆಗಳನ್ನು ಭಾರತೀಯ ಗುಪ್ತಚರ ಸಂಸ್ಥೆ ತಡೆಹಿಡಿದಿದೆ. ಈ ಸಂದರ್ಭದಲ್ಲಿ ದಾವೂದ್ ಛೋಟಾ ಶಕೀಲನೊಂದಿಗೆ ದೂರವಾಣಿಯಲ್ಲಿ ಮಾತನಾಡುತ್ತಾ ಸದ್ಯದಲ್ಲಿಯೇ ಒಂದು ಪ್ರಮುಖ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಹೇಳಿಕೊಂಡಿದ್ದ.ಡಿಸೆಂಬರ್ 26ಕ್ಕೆ ದಾವೂದ್ ಇಬ್ರಾಹಿಂ ಮದುವೆ ವಾರ್ಷಿಕೋತ್ಸವ ಆಗಿರುವುದರಿಂದ ಆ ಕಾರ್ಯಕ್ರಮದ ಬಗ್ಗೆ ದಾವೂದ್ ಪ್ರಸ್ತಾಪಿಸುತ್ತಿದ್ದಾನೆ ಎಂದೇ ಭಾವಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT