ಭಾರತೀಯ ಸೇನೆಯ ಮುಖ್ಯಸ್ಥ ಜನರಲ್ ದಲ್ಬೀರ್ ಸಿಂಗ್ ಸುಹಾಗ್ 
ದೇಶ

ಪಾಕ್ ಸೇನೆ ಹಲವಾರು ಬಾರಿ ಶಾಂತಿ ಮಾತುಕತೆಯ ಹಾದಿ ತಪ್ಪಿಸಿದೆ

ಪಾಕಿಸ್ತಾನದ ಕಾರ್ಯದರ್ಶಿಯವರೊಂದಿಗೆ ಭಾರತ ಮಾತುಕತೆ ನಡೆಸುವ ವಿಷಯದ ಅನಿಶ್ಚಿತತೆ ಬಗ್ಗೆ ಮಾತನಾಡಿದ ಭಾರತೀಯ ಸೇನೆಯ ಮುಖ್ಯಸ್ಥ ...

ನವದೆಹಲಿ: ಪಾಕಿಸ್ತಾನದ ಕಾರ್ಯದರ್ಶಿಯವರೊಂದಿಗೆ ಭಾರತ ಮಾತುಕತೆ ನಡೆಸುವ ವಿಷಯದ ಅನಿಶ್ಚಿತತೆ ಬಗ್ಗೆ ಮಾತನಾಡಿದ ಭಾರತೀಯ ಸೇನೆಯ ಮುಖ್ಯಸ್ಥ ಜನರಲ್ ದಲ್ಬೀರ್ ಸಿಂಗ್ ಸುಹಾಗ್, ಈ ಹಿಂದೆಯೂ ಪಾಕಿಸ್ತಾನ ಸೇನೆ ಹಲವಾರು ಬಾರಿ ಶಾಂತಿ ಮಾತುಕತೆಯ ಹಾದಿ ತಪ್ಪಿಸಿದೆ ಎಂದು ಹೇಳಿದ್ದಾರೆ.
ಪಾಕಿಸ್ತಾನದ ಪ್ರಧಾನಿ  ನವಾಜ್ ಶರೀಫ್ ಅವರು ಭಾರತದೊಂದಿಗೆ ಮಾತುಕತೆ ನಡೆಸಲು ಸಿದ್ಧರಿದ್ದರೂ, ಪಾಕಿಸ್ತಾನ ಸೇನೆ ಅದಕ್ಕೆ ತಯಾರಿರಲಿಲ್ಲ ಎಂಬ ವರದಿಯ ಹಿನ್ನಲೆಯಲ್ಲಿ  ಸುಹಾಗ್ ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ಶಾಂತಿ ಮಾತುಕತೆಗೆ ಧಕ್ಕೆ ತರುವುದಕ್ಕಾಗಿಯೇ ಪಾಕಿಸ್ತಾನ ಸೇನೆ ಮತ್ತು ಐಎಸ್‌ಐ ಸೇರಿಕೊಂಡು ಪಠಾಣ್‌ಕೋಟ್ ಮೇಲೆ ದಾಳಿ ಮಾಡಿತ್ತೇ? ಎಂಬ ಪ್ರಶ್ನೆಗೆ ಉತ್ತರಿಸಿದ ಸುಹಾಗ್, ಪಾಕ್ ಈ ರೀತಿ ವರ್ತಿಸಿದ್ದು ಇದು ಮೊದಲೇನೂ ಅಲ್ಲ. ಈ ಮಾತು ಪಠಾಣ್‌ಕೋಟ್ ಬಗ್ಗೆ ಹೇಳಿದ್ದೂ ಅಲ್ಲ ಎಂದಿದ್ದಾರೆ.
ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಬೇಕು ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದು,  ಭಾರತೀಯ ಸೇನೆ ದೇಶ ರಕ್ಷಣೆಗೆ ಸದಾ ಸಿದ್ದವಾಗಿಯೇ ಇದೆ ಎಂದು ಸುಹಾಗ್ ಹೇಳಿದ್ದಾರೆ.
ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುಹಾಗ್, ಪಂಜಾಬ್ ಗಡಿಪ್ರದೇಶದಲ್ಲಿ ನುಸುಳುವಿಕೆ ಬಗ್ಗೆ ಗಮನ ಹರಿಸಬೇಕಿದೆ. ಆ ಪ್ರದೇಶದಲ್ಲಿ ನಿಯೋಜಿಸಲಾಗಿರುವ ಬಿಎಸ್‌ಎಫ್ ಈ ಬಗ್ಗೆ ಹೆಚ್ಚಿನ ಜಾಗರೂಕತೆ ವಹಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT