ಭೂ ಸೇನಾ ಮುಖ್ಯಸ್ಥ ದಲ್ ಬೀರ್ ಸಿಂಗ್ ಸುಹಾಗ್ (ಸಂಗ್ರಹ ಚಿತ್ರ) 
ದೇಶ

ಭಾರತೀಯ ಸೇನೆ ಎಲ್ಲದ್ದಕ್ಕೂ ಸಿದ್ಧ

ಭಾರತದ ಸೇನಾ ಪಡೆ ಯಾವುದೇ ಕೆಲಸ ಮಾಡಲು ಸಿದ್ಧವಿದೆ ಎಂದು ಭೂ ಸೇನಾ ಮುಖ್ಯಸ್ಥ ಜ.ದಲ್ಬೀರ್ ಸಿಂಗ್ ಸುಹಾಗ್ ಹೇಳಿದ್ದಾರೆ...

ನವದೆಹಲಿ: ಭಾರತದ ಸೇನಾ ಪಡೆ ಯಾವುದೇ ಕೆಲಸ ಮಾಡಲು ಸಿದ್ಧವಿದೆ ಎಂದು ಭೂ ಸೇನಾ ಮುಖ್ಯಸ್ಥ ಜ.ದಲ್ಬೀರ್ ಸಿಂಗ್ ಸುಹಾಗ್ ಹೇಳಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಕೇಂದ್ರ ರಕ್ಷಣಾ ಸಚಿವ ಮನೋಹರ ಪರ್ರಿಕರ್ ಭಾರತಕ್ಕೆ ನೋವು ಮಾಡಿದವರಿಗೆ ಅದೇ ರೀತಿಯ ಭಾವನೆ ಉಂಟು ಮಾಡುವಂತೆ ಮಾಡಬೇಕು ಎಂದು ಹೇಳಿದ್ದರು.  ಅದಕ್ಕೆ ಪೂರಕವಾಗಿ ಜ.ಸುಹಾಗ್ ಹೇಳಿರುವುದು ಗಮನಾರ್ಹವಾಗಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರ  ನೆಲೆಗಳ ಮೇಲೆ ಯಾವುದಾರೂ ರೀತಿಯಲ್ಲಿ ದಾಳಿ ನಡೆಸಲು ಕ್ರಮ  ಕೈಗೊಳ್ಳಲಾಗುತ್ತದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಬುಧವಾರ ಜ.ಸುಹಾಗ್ ಈ ರೀತಿಯ ಪ್ರತಿಕ್ರಿಯೆ ನೀಡಿದ್ದಾರೆ.

ಪಾಕಿಸ್ತಾನ ಆಕ್ರಮಿತ ಪ್ರದೇಶದಲ್ಲಿ 17 ಶಿಬಿರಗಳು ಉಗ್ರ ಕೃತ್ಯಗಳಿಗೆ ತರಬೇತಿ ನೀಡುವಲ್ಲಿ ನಿರತವಾಗಿವೆ ಎಂದು ಅವರು ತಿಳಿಸಿದ್ದಾರೆ. ಆದರೆ, ಅಂತಾರಾಷ್ಟ್ರೀಯ ಒತ್ತಡಗಳ ಹಿನ್ನೆಲೆಯಲ್ಲಿ  ಕೆಲವನ್ನು ಮುಚ್ಚಲಾಗಿದೆ ಎಂದು ಅವರು ಹೇಳಿದರು.

ಕೊರತೆ ಏನೂ ಆಗಿಲ್ಲ: ಪಠಾಣ್ಕೋಟ್ ದಾಳಿಯಲ್ಲಿ ಸೇನೆ ಮತ್ತು ಇತರ ಸಂಸ್ಥೆಗಳ ನಡುವೆ ಸಂವಹನ ಕೊರತೆ ಆಗಿಲ್ಲ. ಎಲ್ಲ ಸಂಸ್ಥೆಗಳೂ ಒಟ್ಟಾಗಿ ಕಾರ್ಯಾಚರಣೆ ನಡೆಸಿವೆ ಎಂದು ಅವರು  ಹೇಳಿದ್ದಾರೆ. ಎಲ್ಲ ರೀತಿಯ ಕಾರ್ಯಾಚರಣೆಯಿಂದಲೂ ಸೇನಾ ಪಡೆ ಪಾಠ ಕಲಿತುಗೊಳ್ಳುತ್ತಿದೆ ಎಂದು ಭೂಸೇನಾ ಮುಖ್ಯಸ್ಥ ಹೇಳಿದ್ದಾರೆ.

ಚೀನಾ ವೈರ್ಲೆಸ್ ಸೆಟ್ ವಶಕ್ಕೆ: ಈ ನಡುವೆ ಘಟನೆಗೆ ಸಂಬಂಧಿಸಿದಂತೆ ಎನ್ಐಎ ತನಿಖೆ ಮುಂದುವರಿಸಿದೆ. ಪಠಾಣ್ಕೋಟ್ ವಾಯುನೆಲೆಯ ಹೊರಭಾಗದಲ್ಲಿ ನಿಂತಿದ್ದ ವಾಹನವೊಂದರಿಂದ  ಚೀನಾ ನಿರ್ಮಿತ ವೈರ್ಲೆಸ್ ಸೆಟ್ ಒಂದನ್ನು ವಶಪಡಿಸಿಕೊಳ್ಳಲಾಗಿದೆ. ಅದನ್ನು ಚಂಡೀಗಡದಲ್ಲಿರುವ ಕೇಂದ್ರೀಯ ವಿಧಿ ವಿಜ್ಞಾನ ಪ್ರಯೋಗಶಾಲೆಗೆ ಕಳುಹಿಸಲಾಗಿದೆ. ಮತ್ತೊಂದೆಡೆ  ಬುಧವಾರವೂ ಗುರುದಾಸ್ಪುರ ಎಸ್ಪಿ ಸಲ್ವಿಂದರ್ ಸಿಂಗ್‍ರ ವಿಚಾರಣೆ ನಡೆಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT