ಸಾಂದರ್ಭಿಕ ಚಿತ್ರ 
ದೇಶ

ಸಿಕ್ಕಿಂ ಈಗ ಸಂಪೂರ್ಣ ಸಾವಯವ ಕೃಷಿ ರಾಜ್ಯ

ಈಶಾನ್ಯ ಭಾರತದ ಪುಟ್ಟ ರಾಜ್ಯ ಸಿಕ್ಕಿಂ ದೇಶದ ಮೊದಲ `ಸಾವಯವ ರಾಜ್ಯ' ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ...

ಸಿಕ್ಕಿಂ: ಈಶಾನ್ಯ ಭಾರತದ ಪುಟ್ಟ ರಾಜ್ಯ ಸಿಕ್ಕಿಂ ದೇಶದ ಮೊದಲ `ಸಾವಯವ ರಾಜ್ಯ' ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
75 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಸುಸ್ಥಿರ ಕೃಷಿ ಕೈಗೊಂಡು ಈ ಸಾಧನೆ ಮಾಡಿದೆ. ಪವನ್ ಚಾಮ್ಲಿಂಗ್ ನೇತೃತ್ವದ ಸರ್ಕಾರ 2003ರಲ್ಲಿ ಸಿಕ್ಕಿಂ ಅನ್ನು ಸಂಪೂರ್ಣ ಸಾವಯವ ಕೃಷಿ ರಾಜ್ಯವಾಗಿ ಮಾಡುವ ಸಂಕಲ್ಪ ತೊಟ್ಟಿತ್ತು. ಹೀಗಾಗಿ, ರಾಸಾಯನಿಕಗಳನ್ನು ನಿಷೇಧಿಸಲಾಯಿತು. ಸಾವಯವ ಪರಿಕರಗಳ ಬಳಕೆ ಹೆಚ್ಚಿತು. ಪರಿಣಾಮ, ಸಿಕ್ಕಿಂ ಇಂದು ಸಾವಯವ ಕೃಷಿ ರಾಜ್ಯವಾಗಿ ರೂಪಾಂತರಗೊಂಡಿದೆ. 
``ಈ ಮಾದರಿ ವ್ಯವಸಾಯವನ್ನು ಆದಾಯದ ಮೂಲವಾಗಿಸಿದೆ. ಜೈವಿಕ ವೈವಿಧ್ಯತೆ, ಮಣ್ಣಿನ ಫಲವತ್ತತೆ, ಮತ್ತು ಪರಿಸರ ರಕ್ಷಣೆ ಸಾಧ್ಯವಾಗಿದೆ. ಸಾವಯವ ಕೃಷಿಯಿಂದ ಉತ್ಪಾದನೆಯೂ ಹೆಚ್ಚಿದೆ.
ಜೈವಿಕ ಗೊಬ್ಬರ ಮತ್ತು ಕೀಟನಾಶಕಗಳ ಬಗ್ಗೆ ರೈತರಿಗೆ ಸರ್ಕಾರ ಜಾಗೃತಿ ನೀಡಿದೆ. ಜತೆಗೆ  ಮಜಿತರ್ ನಲ್ಲಿ ಜೈವಿಕ ಗೊಬ್ಬರ ಕಾರ್ಖಾನೆ ಆರಂಭಿಸಿ ಗೊಬ್ಬರ, ಕೀಟನಾಶಕ ಪೂರೈಸಲಾಗುತ್ತದೆ ಎಂದು ಕೃಷಿ ಇಲಾಖೆ ನಿರ್ದೇಶಕ ಕರೋಲಾ ಬುಟಿಯಾ ತಿಳಿಸಿದ್ದಾರೆ. ಪ್ರಸ್ತುತ, ಸುಸ್ಥಿರ ಕೃಷಿ ಮೂಲಕ ಸಿಕ್ಕಿಂ 1.24 ದಶಲಕ್ಷ ಟನ್ ಸಾವಯವ ಕೃಷಿ ಉತ್ಪನ್ನವನ್ನು ಉತ್ಪಾದಿಸುತ್ತಿದೆ.
ಪ್ರವಾಸೋದ್ಯಮ ಅಭಿವೃದ್ಧಿ: ಹೇಳಿ ಕೇಳಿ ಸಿಕ್ಕಿಂ ಹಿಮಾಲಯದ ತಪ್ಪಲನಾಡು. ಇಲ್ಲಿಗೆ ಪ್ರವಾಸಿಗರು ಹೆಚ್ಚು. ರೆಸಾರ್ಟ್, ಹೊಟೆಲ್ ಗಳಲ್ಲಿ `ಸಾವಯವ ಕೃಷಿ ಆಹಾರ ಲಭ್ಯ' ಎಂಬ ಬೋರ್ಡ್ಗಳು ನೇತು ಬಿದ್ದಿವೆ. ಹೀಗಾಗಿ ವ್ಯಾಪಾರವೂ ಜೋರಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT