ಸುನಂದಾ ಪುಷ್ಕರ್ ಮತ್ತು ಸುಬ್ರಮಣಿಯನ್ ಸ್ವಾಮಿ 
ದೇಶ

ಸುನಂದಾ ದೇಹದಲ್ಲಿ ಯಾವ ವಿಷವಿತ್ತು ಎಂಬದನ್ನು ಬಸ್ಸಿ ಬಹಿರಂಗ ಪಡಿಸುತ್ತಿಲ್ಲ: ಸುಬ್ರಮಣಿಯನ್ ಸ್ವಾಮಿ

ಸಂಸದ ಶಶಿ ತರೂರ್‌ ಅವರ ಪತ್ನಿ ಸುನಂದಾ ಪುಷ್ಕರ್‌ ಸಾವಿಗೆ ನಿಖರವಾದ ವಿಷ ಯಾವುದು ಎಂಬುದನ್ನು ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್ ಬಸ್ಸಿ ಬಹಿರಂಗ ...

ನವದೆಹಲಿ: ಸಂಸದ ಶಶಿ ತರೂರ್‌ ಅವರ ಪತ್ನಿ ಸುನಂದಾ ಪುಷ್ಕರ್‌ ಸಾವಿಗೆ ನಿಖರವಾದ ವಿಷ ಯಾವುದು ಎಂಬುದನ್ನು ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್ ಬಸ್ಸಿ ಬಹಿರಂಗ ಪಡಿಸುತ್ತಿಲ್ಲ ಎಂದು ಬಿಜೆಪಿ ನಾಯಕ ಸುಬ್ರಹ್ಮಣ್ಯನ್‌ ಸ್ವಾಮಿ ಅವರು ಆರೋಪಿಸಿದ್ದಾರೆ.

ಸುನಂದಾ ಸಾವಿಗೆ ಯಾವ ರಾಸಾಯನಿಕ ಮಿಶ್ರಣದ ವಿಷ ಕಾರಣವಾಯಿತೆಂಬುದನ್ನು ಪೊಲೀಸರು ತಿಳಿಸುತ್ತಿಲ್ಲ. ಇಂಜೆಕ್ಷನ್‌ ಮೂಲಕ ನೀಡಬಲ್ಲ ಲಿಡೋಕೇನ್‌ ಎಂಬ ವಿಷಕಾರಿ ಅಂಶವು ಸುನಂದಾ ಅವರ ದೇಹದಲ್ಲಿ ಕಂಡುಬಂದಿತ್ತು ಎಂದು ಎಫ್ ಬಿಐ  ಹೇಳಿರುವುದನ್ನು ಬಸ್ಸಿ ಅವರು ಮಾಧ್ಯಮಕ್ಕೆ ತಿಳಿಸಿಲ್ಲ' ಎಂದು ಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ಏಮ್ಸ್ ನಿಂದ ಸುನಂದಾ ಪುಷ್ಕರ್‌ ಅವರ ಅಂಗಾಂಶಗಳ ಪರೀಕ್ಷಾ ವರದಿಯನ್ನು ನಿನ್ನೆ ಪಡೆದ ಬಳಿಕ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ್ದ ದೆಹಲಿ ಪೊಲೀಸ್‌ ಮುಖ್ಯಸ್ಥ ಬಸ್ಸಿ ಅವರು "ಸುನಂದಾ ಅವರ ಸಾವು ಅಸಹಜ ಕಾರಣಗಳಿಂದಾಗಿ ಸಂಭವಿಸಿದೆ' ಎಂದು ಹೇಳಿದ್ದರು.ಎಫ್ ಬಿ ಐ ತನ್ನ ವರದಿಯಲ್ಲಿ  ನಮಗೆ ಕಳುಹಿಸಲಾದ ಅಂಗಾಂಶಗಳ ಯಾವುದೇ ಮಾದರಿಯಲ್ಲಿ ರೇಡಿಯೋ ಆಕ್ಟೀವ್‌ ಅಂಶಗಳು ಕಂಡು ಬಂದಿಲ್ಲ ಎಂದು ಸ್ಪಷ್ಟಪಡಿಸಿತ್ತು' ಎಂಬುದಾಗಿ ಸ್ವಾಮಿ ಮಾಧ್ಯಮಗಳಿಗೆ ತಿಳಿಸಿದ್ದಾರೆ..

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ. ಶಿವಕುಮಾರ್: ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT