ಮೊಹಮದ್ ಶಮಿ 
ದೇಶ

ಗೋಹತ್ಯೆ ವಿಷಯದಲ್ಲಿ ನಮ್ಮ ಕುಟುಂಬವನ್ನು ಬಲಿಪಶು ಮಾಡಲಾಗುತ್ತಿದೆ: ಮೊಹಮದ್ ಶಮಿ ತಂದೆ

ಗೋಹತ್ಯೆ ವಿಷಯದಲ್ಲಿ ನಮ್ಮ ಕುಟುಂಬವನ್ನು ಅನಗತ್ಯವಾಗಿ ಗುರಿಯಾಗಿಸಿಕೊಂಡು ಬಲಿಪಶು ಮಾಡಲಾಗುತ್ತಿದೆ ಎಂದು ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್

ನವದೆಹಲಿ: ಗೋಹತ್ಯೆ ವಿಷಯದಲ್ಲಿ ನಮ್ಮ ಕುಟುಂಬವನ್ನು ಅನಗತ್ಯವಾಗಿ ಗುರಿಯಾಗಿಸಿಕೊಂಡು ಬಲಿಪಶು ಮಾಡಲಾಗುತ್ತಿದೆ ಎಂದು ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮದ್ ಶಮೀ ತಂದೆ ಆರೋಪಿಸಿದ್ದಾರೆ.

ಗೋಹತ್ಯೆ ಪ್ರಕರಣದ ಆರೋಪಿಗಳ ಪರವಾಗಿ ಪೊಲೀಸರ ವಿರುದ್ಧ ಹಲ್ಲೆ ನಡೆಸಿ, ಅವರ ಬಿಡುಗಡೆಗೆ ಒತ್ತಡ ಹೇರಿದ ಆರೋಪಕ್ಕೆ ಗುರಿಯಾಗಿದ್ದ ವೇಗದ ಬೌಲರ್‌ ಶಮಿ ಸಹೋದರ ಮೊಹಮ್ಮದ್‌ ಹಸೀಬ್‌ ಬಂಧನಕ್ಕೊಳಗಾಗಿ ಬಿಡುಗಡೆಯಾಗಿರುವ ಮರುದಿನವೇ ತಮ್ಮ ಕುಟುಂಬವನ್ನು ಟಾರ್ಗೆಟ್‌ ಮಾಡಲಾಗುತ್ತಿದೆ ಎಂದು ತೌಸೀಫ್‌ ಆಪಾದಿಸಿದ್ದಾರೆ.

ಹಸೀಬ್‌ ಘಟನಾ ಸ್ಥಳದಲ್ಲಿದ್ದ ಅನೇಕರ ಹಾಗೆ ಅಲ್ಲಿಗೆ ವೀಕ್ಷಕನಾಗಿ ಹೋಗಿದ್ದನಷ್ಟೇ. ಆತನನ್ನು ಸುಖಾಸುಮ್ಮನೆ ಪ್ರಕರಣದಲ್ಲಿ ಎಳೆದು ತರಲಾಗಿದೆ. ಮಗ ಶಮಿ ಭಾರತೀಯ ಕ್ರಿಕೆಟ್‌ ತಂಡಕ್ಕೆ ಆಯ್ಕೆಯಾದ ಮೇಲೆ ನಮಗೆ ಸಿಗುತ್ತಿರುವ ಪ್ರಚಾರದಿಂದ ಅಸೂಯೆಗೊಂಡಿರುವ ಕೆಲವರು ನಮ್ಮ ಕುಟುಂಬದ ಮೇಲೆ ಸಂಚು ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.  ಈ ವಿಚಾರವನ್ನು ಜಿಲ್ಲಾ ನ್ಯಾಯಾಧೀಶರ ಗಮನಕ್ಕೆ ತಿಂಗಳ ಹಿಂದೆ ತಂದಿದ್ದೆ. ಅದರ ಫಲಶ್ರುತಿಯೇ ಇದು(ಬಂಧನ). ಗೋಹತ್ಯೆಯಂಥ ಪದವನ್ನು ನಮ್ಮ ವಿರುದ್ಧ ದ್ವೇಷಸಾಧನೆಗಾಗಿ ಬಳಸಲಾಗುತ್ತಿದೆ ಎಂದು ತೌಸೀಫ್‌ ದೂರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

SCROLL FOR NEXT