ಮೊಹಮದ್ ಶಮಿ 
ದೇಶ

ಗೋಹತ್ಯೆ ವಿಷಯದಲ್ಲಿ ನಮ್ಮ ಕುಟುಂಬವನ್ನು ಬಲಿಪಶು ಮಾಡಲಾಗುತ್ತಿದೆ: ಮೊಹಮದ್ ಶಮಿ ತಂದೆ

ಗೋಹತ್ಯೆ ವಿಷಯದಲ್ಲಿ ನಮ್ಮ ಕುಟುಂಬವನ್ನು ಅನಗತ್ಯವಾಗಿ ಗುರಿಯಾಗಿಸಿಕೊಂಡು ಬಲಿಪಶು ಮಾಡಲಾಗುತ್ತಿದೆ ಎಂದು ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್

ನವದೆಹಲಿ: ಗೋಹತ್ಯೆ ವಿಷಯದಲ್ಲಿ ನಮ್ಮ ಕುಟುಂಬವನ್ನು ಅನಗತ್ಯವಾಗಿ ಗುರಿಯಾಗಿಸಿಕೊಂಡು ಬಲಿಪಶು ಮಾಡಲಾಗುತ್ತಿದೆ ಎಂದು ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮದ್ ಶಮೀ ತಂದೆ ಆರೋಪಿಸಿದ್ದಾರೆ.

ಗೋಹತ್ಯೆ ಪ್ರಕರಣದ ಆರೋಪಿಗಳ ಪರವಾಗಿ ಪೊಲೀಸರ ವಿರುದ್ಧ ಹಲ್ಲೆ ನಡೆಸಿ, ಅವರ ಬಿಡುಗಡೆಗೆ ಒತ್ತಡ ಹೇರಿದ ಆರೋಪಕ್ಕೆ ಗುರಿಯಾಗಿದ್ದ ವೇಗದ ಬೌಲರ್‌ ಶಮಿ ಸಹೋದರ ಮೊಹಮ್ಮದ್‌ ಹಸೀಬ್‌ ಬಂಧನಕ್ಕೊಳಗಾಗಿ ಬಿಡುಗಡೆಯಾಗಿರುವ ಮರುದಿನವೇ ತಮ್ಮ ಕುಟುಂಬವನ್ನು ಟಾರ್ಗೆಟ್‌ ಮಾಡಲಾಗುತ್ತಿದೆ ಎಂದು ತೌಸೀಫ್‌ ಆಪಾದಿಸಿದ್ದಾರೆ.

ಹಸೀಬ್‌ ಘಟನಾ ಸ್ಥಳದಲ್ಲಿದ್ದ ಅನೇಕರ ಹಾಗೆ ಅಲ್ಲಿಗೆ ವೀಕ್ಷಕನಾಗಿ ಹೋಗಿದ್ದನಷ್ಟೇ. ಆತನನ್ನು ಸುಖಾಸುಮ್ಮನೆ ಪ್ರಕರಣದಲ್ಲಿ ಎಳೆದು ತರಲಾಗಿದೆ. ಮಗ ಶಮಿ ಭಾರತೀಯ ಕ್ರಿಕೆಟ್‌ ತಂಡಕ್ಕೆ ಆಯ್ಕೆಯಾದ ಮೇಲೆ ನಮಗೆ ಸಿಗುತ್ತಿರುವ ಪ್ರಚಾರದಿಂದ ಅಸೂಯೆಗೊಂಡಿರುವ ಕೆಲವರು ನಮ್ಮ ಕುಟುಂಬದ ಮೇಲೆ ಸಂಚು ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.  ಈ ವಿಚಾರವನ್ನು ಜಿಲ್ಲಾ ನ್ಯಾಯಾಧೀಶರ ಗಮನಕ್ಕೆ ತಿಂಗಳ ಹಿಂದೆ ತಂದಿದ್ದೆ. ಅದರ ಫಲಶ್ರುತಿಯೇ ಇದು(ಬಂಧನ). ಗೋಹತ್ಯೆಯಂಥ ಪದವನ್ನು ನಮ್ಮ ವಿರುದ್ಧ ದ್ವೇಷಸಾಧನೆಗಾಗಿ ಬಳಸಲಾಗುತ್ತಿದೆ ಎಂದು ತೌಸೀಫ್‌ ದೂರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT