ರಾಜನಾಥ್ ಸಿಂಗ್ 
ದೇಶ

ಐಸಿಸ್ ಕುರಿತು ಗುಪ್ತಚರ, ಪೊಲೀಸ್ ಅಧಿಕಾರಿಗಳೊಂದಿಗೆ ರಾಜನಾಥ್ ಸಿಂಗ್ ಸಭೆ

ಗುಪ್ತಚರ ಇಲಾಖೆ ಹಿರಿಯ ಅಧಿಕಾರಿಗಳು, ತನಿಖಾ ಸಂಸ್ಥೆ ಹಾಗೂ 13 ರಾಜ್ಯಗಳ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಶನಿವಾರ ಸಭೆ...

ನವದೆಹಲಿ: ಗುಪ್ತಚರ ಇಲಾಖೆ ಹಿರಿಯ ಅಧಿಕಾರಿಗಳು, ತನಿಖಾ ಸಂಸ್ಥೆ ಹಾಗೂ 13 ರಾಜ್ಯಗಳ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಶನಿವಾರ ಸಭೆ ನಡೆಸಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು, ಸಾಮಾಜಿಕ ಜಾಲ ತಾಣ ಹಾಗೂ ಇತರ ಮೂಲಗಳಿಂದ ಯುವಕರ ಮೇಲೆ ಪ್ರಭಾವ ಬೀರುತ್ತಿರುವ ಐಎಸ್‌ಐಎಸ್ ವಿರುದ್ಧ ಕ್ರಮ ತೆಗೆದುಕೊಳ್ಳುವ ಬಗ್ಗೆ ಚರ್ಚಿಸಿದರು.
ಭಾರತದ ಕೆಲ ಯುವಕರು ಐಎಸ್‌ ಉಗ್ರ ಸಂಘಟನೆ ಸೆಳೆತಕ್ಕೊಳಗಾಗಿ ಸೇರ್ಪಡೆಗೊಳ್ಳುತ್ತಿದ್ದಾರೆ. ಈ ದೊಡ್ಡ ಸವಾಲನ್ನು ನಿರ್ವಹಿಸುವ ಬಗ್ಗೆ ಮತ್ತು ಪ್ರಸ್ತುತ ಪರಿಸ್ಥಿತಿಯ ಪರಾಮರ್ಶೆ ನಡೆಸಲು ರಾಜನಾಥ್‌ ಅವರು ಸುದೀರ್ಘ ಸಭೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಸಾಮಾಜಿಕ ಜಾಲ ತಾಣಗಳ ದುರ್ಬಳಕೆ, ಐಎಸ್‌ಐಗೆ ಭಾರತೀಯರನ್ನು ವಿಷೇಶವಾಗಿ ಯುವಕರನ್ನು ಆಕರ್ಷಿಸುತ್ತಿರುವ ಮೂಲಗಳ ಬಗ್ಗೆ ಹಾಗೂ ಅದರ ತಡೆಗೆ ತೆಗೆದುಕೊಳ್ಳಬಹುದಾದ ಕಾನೂನು ಕ್ರಮಗಳ ಕುರಿತು ಇಂದಿನ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT