ರಾಜನಾಥ್ ಸಿಂಗ್ 
ದೇಶ

ಐಸಿಸ್ ಕುರಿತು ಗುಪ್ತಚರ, ಪೊಲೀಸ್ ಅಧಿಕಾರಿಗಳೊಂದಿಗೆ ರಾಜನಾಥ್ ಸಿಂಗ್ ಸಭೆ

ಗುಪ್ತಚರ ಇಲಾಖೆ ಹಿರಿಯ ಅಧಿಕಾರಿಗಳು, ತನಿಖಾ ಸಂಸ್ಥೆ ಹಾಗೂ 13 ರಾಜ್ಯಗಳ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಶನಿವಾರ ಸಭೆ...

ನವದೆಹಲಿ: ಗುಪ್ತಚರ ಇಲಾಖೆ ಹಿರಿಯ ಅಧಿಕಾರಿಗಳು, ತನಿಖಾ ಸಂಸ್ಥೆ ಹಾಗೂ 13 ರಾಜ್ಯಗಳ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಶನಿವಾರ ಸಭೆ ನಡೆಸಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು, ಸಾಮಾಜಿಕ ಜಾಲ ತಾಣ ಹಾಗೂ ಇತರ ಮೂಲಗಳಿಂದ ಯುವಕರ ಮೇಲೆ ಪ್ರಭಾವ ಬೀರುತ್ತಿರುವ ಐಎಸ್‌ಐಎಸ್ ವಿರುದ್ಧ ಕ್ರಮ ತೆಗೆದುಕೊಳ್ಳುವ ಬಗ್ಗೆ ಚರ್ಚಿಸಿದರು.
ಭಾರತದ ಕೆಲ ಯುವಕರು ಐಎಸ್‌ ಉಗ್ರ ಸಂಘಟನೆ ಸೆಳೆತಕ್ಕೊಳಗಾಗಿ ಸೇರ್ಪಡೆಗೊಳ್ಳುತ್ತಿದ್ದಾರೆ. ಈ ದೊಡ್ಡ ಸವಾಲನ್ನು ನಿರ್ವಹಿಸುವ ಬಗ್ಗೆ ಮತ್ತು ಪ್ರಸ್ತುತ ಪರಿಸ್ಥಿತಿಯ ಪರಾಮರ್ಶೆ ನಡೆಸಲು ರಾಜನಾಥ್‌ ಅವರು ಸುದೀರ್ಘ ಸಭೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಸಾಮಾಜಿಕ ಜಾಲ ತಾಣಗಳ ದುರ್ಬಳಕೆ, ಐಎಸ್‌ಐಗೆ ಭಾರತೀಯರನ್ನು ವಿಷೇಶವಾಗಿ ಯುವಕರನ್ನು ಆಕರ್ಷಿಸುತ್ತಿರುವ ಮೂಲಗಳ ಬಗ್ಗೆ ಹಾಗೂ ಅದರ ತಡೆಗೆ ತೆಗೆದುಕೊಳ್ಳಬಹುದಾದ ಕಾನೂನು ಕ್ರಮಗಳ ಕುರಿತು ಇಂದಿನ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT