ಅರವಿಂದ್ ಕೇಜ್ರಿವಾಲ್ ಮುಖಕ್ಕೆ ಮಸಿ(ಸಂಗ್ರಹ ಚಿತ್ರ) 
ದೇಶ

ದೆಹಲಿ ಸಿಎಂ ಕೇಜ್ರಿವಾಲ್ ಮುಖಕ್ಕೆ ಮಸಿ ಬಳಿದ ಮಹಿಳೆ

ಸಮ ಬೆಸ ಸಂಖ್ಯೆ ಸೂತ್ರದ ಯಶಸ್ಸಿನ ಬಗ್ಗೆ ರ್ಯಾಲಿಯೊಂದರಲ್ಲಿ ಮಾತನಾಡುವ ವೇಳೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮುಖಕ್ಕೆ ಮಹಿಳೆಯೊಬ್ಬರು ಮಸಿ ಬಳಿದಿದ್ದಾರೆ.

ನವದೆಹಲಿ: ಸಮ-ಬೆಸ ಸಂಖ್ಯೆ ಸೂತ್ರದ ಯಶಸ್ಸಿನ ಬಗ್ಗೆ ರ್ಯಾಲಿಯೊಂದರಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುವ ವೇಳೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮುಖಕ್ಕೆ ಮಹಿಳೆಯೊಬ್ಬರು ಮಸಿ ಬಳಿದಿದ್ದಾರೆ. 
ದೆಹಲಿಯ ಚತ್ರಸಾಲ್ ಸ್ಟೇಡಿಯಂ ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲು ಪ್ರಾರಂಭಿಸಿದ ಕೇಜ್ರಿವಾಲ್ ಮೇಲೆ ಭದ್ರತೆಯನ್ನು ಉಲ್ಲಂಘಿಸಿದ ಮಹಿಳೆಯೊಬ್ಬರು ಕೇಜ್ರಿವಾಲ್ ಮೇಲೆ ಮಸಿ ಹಾಗೂ ಪೇಪರ್ ತುಂಡುಗಳನ್ನು ಎರಚಿದ್ದಾರೆ. 
ಅಚ್ಚರಿಯೆಂದರೆ ಮಸಿ ಬಳಿದ ಮಹಿಳೆ ಭಾವನ ಪಂಜಾಬ್ ನ ಆಮ್ ಆದ್ಮಿ ಘಟಕದ ಕಾರ್ಯಕರ್ತೆಯಾಗಿದ್ದಾರೆ. ಮಹಿಳೆಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸಿಎನ್ ಜಿ ಹಗರಣದಲ್ಲಿ ಆದ್ಮಿ ಪಕ್ಷದವರು ಭಾಗಿಯಾಗಿದ್ದು ಇದರ ಬಗ್ಗೆ ತಮ್ಮ ಬಳಿ ಸಾಕ್ಷ್ಯ ಇರುವುದಾಗಿ ಮಹಿಳೆ ಹೇಳಿದ್ದಾರೆ.
ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಅರವಿಂದ್ ಕೇಜ್ರಿವಾಲ್ ಅವರ ಭದ್ರತೆ ಉಲ್ಲಂಘನೆಯಾಗಿದೆ, ದೆಹಲಿಯ ಇಡೀ ಸಚಿವ ಸಂಪುಟವೇ ಇದ್ದರೂ ಸಾಕಷ್ಟು ಪ್ರಮಾಣದಲ್ಲಿ ಪೊಲೀಸರಿರಲಿಲ್ಲ ಎಂದು ದೂರಿದ್ದಾರೆ. ದೆಹಲಿ ಪೊಲೀಸರು ಬಿಜೆಪಿ ನಿಯಂತ್ರಣದಲ್ಲಿದ್ದು, ಈ ಘಟನೆ ಹಿಂದೆ ರಾಜಕೀಯ ಷಡ್ಯಂತ್ರವಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT