ನರೇಂದ್ರ ಮೋದಿ 
ದೇಶ

ಸ್ವಚ್ಛ ಭಾರತದ ಗೆ ನವೀನ ಮಾದರಿಯ ಸಲಹೆಯನ್ನು ಪ್ರಧಾನಿ ಮುಂದಿಟ್ಟ ಕಾರ್ಯದರ್ಶಿಗಳ ತಂಡ

ಕೇಂದ್ರ ಸರ್ಕಾರದ ಕಾರ್ಯದರ್ಶಿಗಳ ತಂಡವೊಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಸ್ವಚ್ಛ ಭಾರತ, ಶಿಕ್ಷಿತ್ ಭಾರತ್ ಯೋಜನೆಗಳ ಬಗೆಗಿನ ಕಲ್ಪನೆಗಳು ಮತ್ತು ಸಲಹೆಗಳನ್ನು ಚರ್ಚಿಸಿದ್ದಾರೆ.

ನವದೆಹಲಿ: ಕೇಂದ್ರ  ಸರ್ಕಾರದ ಕಾರ್ಯದರ್ಶಿಗಳ ತಂಡವೊಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಸ್ವಚ್ಛ ಭಾರತ, ಶಿಕ್ಷಿತ್ ಭಾರತ್ ಯೋಜನೆಗಳ ಬಗೆಗಿನ ಕಲ್ಪನೆಗಳು ಮತ್ತು ಸಲಹೆಗಳನ್ನು ಚರ್ಚಿಸಿದ್ದಾರೆ.

ಆಡಳಿತದ ವಿವಿಧ ಕ್ಷೇತ್ರಗಳಲ್ಲಿ ಬದಲಾವಣೆ ತರುವ ಉದ್ದೇಶದಿಂದ ಹೊಸ ಆಲೋಚನೆಗಳೊಂದಿಗೆ ಸಲಹೆಗಳನ್ನು ನೀಡುವಂತೆ ಪ್ರಧಾನಿ ಮೋದಿ ಅವರೇ ಕೆಲ ದಿನಗಳ ಹಿಂದೆ ಸರ್ಕಾರದ ಉನ್ನತ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದರು ಈ ಹಿನ್ನೆಲೆಯಲ್ಲಿ ಕಾರ್ಯದರ್ಶಿಗಳ ತಂಡ ಸ್ವಚ್ಛ ಭಾರತ, ಶಿಕ್ಷಿತ್ ಭಾರತ್ ಯೋಜನೆಗಳ ಬಗ್ಗೆ ಸಲಹೆಗಳನ್ನು ಪ್ರಧಾನಿ ಮೋದಿ ಮುಂದಿಟ್ಟಿದ್ದಾರೆ.

ನೀತಿ ಆಯೋಗದ ಉಪಾಧ್ಯಕ್ಷ ಅರವಿಂದ್ ಪನಗಾರಿಯಾ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಮನೋಹರ್ ಪರಿಕ್ಕರ್ ಸಭೆಯಲ್ಲಿ ಭಾಗವಹಿಸಿದ್ದರು. ಸ್ವಚ್ಛ ಭಾರತ, ಶಿಕ್ಷಿತ್ ಭಾರತ್ ಯೋಜನೆಗಳ ಬಗ್ಗೆ   ಕಾರ್ಯದರ್ಶಿಗಳು ನೀಡಿದ ಸಲಹೆಗಳ ಬಗ್ಗೆ ಹಲವು ಸದಸ್ಯರು ಹಾಗೂ ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.

ವಿವಿಧ ಇಲಾಖೆಗಳ ಆಡಳಿತದಲ್ಲಿ ಬದಲಾವಣೆ ತರುವುದಕ್ಕಾಗಿ ಮೋದಿ ಅವರೇ ರಚಿಸಿದ್ದ 8 ತಂಡಗಳ ಪೈಕಿ ನಾಲ್ಕು ತಂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲಹೆಗಳನ್ನು ನೀಡಿವೆ. ಜ.12 ರಂದು ಶಕ್ತಿ ಸಂರಕ್ಷಣೆ ಮತ್ತು ದಕ್ಷತೆ ಕುರಿತಂತೆ ಕಾರ್ಯದರ್ಶಿಗಳ ತಂಡವೊಂದು ಪ್ರಧಾನಿ ಎದುರು ಸಲಹೆಗಳನ್ನು ಮಂಡಿಸಿವೆ. ಉತ್ತಮ ಆಡಳಿತ, ಉದ್ಯೋಗ ಸೃಷ್ಟಿಗೆ ಸಂಬಂಧಿಸಿದ ತಂತ್ರಗಳು, ಕೃಷಿ ಕೇಂದ್ರಿತ ಕ್ರಮಗಳು, ಶಿಕ್ಷಣ- ಆರೋಗ್ಯ, ಬಜೆಟ್ ಮತ್ತು ಪರಿಣಾಮಕಾರಿ ಅನುಷ್ಠಾನ ಕುರಿತು ನವೀನ ಮಾದರಿಯ ವಿಚಾರಗಳನ್ನು ಪ್ರಧಾನಿ ಮೋದಿ ಅವರಿಗೆ ಸಲಹೆ ನೀಡಲು ಕಾರ್ಯದರ್ಶಿಗಳಿಗೆ ಸೂಚಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT