ಪ್ರಕಾಶ್ ಸಿಂಗ್ ಬಾದಲ್ 
ದೇಶ

ನನ್ನ ಕೊನೆ ಉಸಿರಿರುವವರೆಗೆ ಬಿಜೆಪಿ-ಎಸ್ಎಡಿ ಮೈತ್ರಿ ಉಸಿರು ನಿಲ್ಲುವುದಿಲ್ಲ: ಪಂಜಾಬ್ ಸಿಎಂ ಪರ್‌ಕಾಶ್ ಸಿಂಗ್ ಬಾದಲ್

ತಮ್ಮ ಕೊನೆಯ ಉಸಿರು ಇರುವವರೆಗೆ ಮೈತ್ರಿಗೆ ಅಪಾಯವಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿಪರ್‌ಕಾಶ್ ಸಿಂಗ್ ಬಾದಲ್ ಹೇಳಿದ್ದಾರೆ.

ಪಂಜಾಬ್: ಪಂಜಾಬ್ ನಲ್ಲಿ ಬಿಜೆಪಿ- ಎಸ್ಎಡಿ ಮೈತ್ರಿ ತ್ವತ್ವದ ಆಧಾರದಲ್ಲಿ ನಡೆಯುತ್ತಿದ್ದು, ತಮ್ಮ ಕೊನೆಯ  ಉಸಿರು ಇರುವವರೆಗೆ ಮೈತ್ರಿಗೆ ಅಪಾಯವಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಪರ್‌ಕಾಶ್ ಸಿಂಗ್ ಬಾದಲ್  ಹೇಳಿದ್ದಾರೆ.

ನಾನು ಉಸಿರಾಡುವವರೆಗೂ ಬಿಜೆಪಿ-ಎಸ್ಎಡಿ ಮೈತ್ರಿ ಉಸಿರು ನಿಲ್ಲುವುದಿಲ್ಲ. ಪಂಜಾಬ್ ನಲ್ಲಿ ಬಿಜೆಪಿ-ಎಸ್ಎಡಿ ಮೈತ್ರಿ ಕೇವಲ ರಾಜಕೀಯ ಮೈತ್ರಿಯಲ್ಲ, ಅದು ತತ್ವದ ಆಧಾರದಲ್ಲಿರುವ ಮೈತ್ರಿ ಎಂದು ಪ್ರಕಾಶ್ ಸಿಂಗ್ ಬಾದಲ್ ಅಭಿಪ್ರಾಯಪಟ್ಟಿದ್ದಾರೆ. ಮೈತ್ರಿಕೂಟದ ಕೆಲವು ನಾಯಕರ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿದ ವೇಳೆ ಬಾದಲ್ ಈ ಹೇಳಿಕೆ ನೀಡಿದ್ದಾರೆ.  
 
 ಪಂಜಾಬ್ ಮೆಡಿಕಲ್ ಕೌನ್ಸಿಲ್ ಅಧ್ಯಕ್ಷ ಸ್ಥಾನದಿಂದ ಮುಖ್ಯಮಂತ್ರಿಯವರ ಸಲಹೆಗಾರ ಮಹೇಶ್ ಇಂದ್ರ  ಸಿಂಗ್ ಗ್ರೆವಲ್ ಅವರ ಸಹೋದರನನ್ನು ವೈಧ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಚಿವ ಅನಿಲ್ ಜೋಶಿ ವಜಾಗೊಳಿಸಿರುವುದು ರಾಜಕೀಯ ತಿರುವು ಪಡೆದಿದ್ದು ಬಿಜೆಪಿ- ಶಿರೋಮಣಿ ಅಖಾಲಿ ದಳ(ಎಸ್ಎಡಿ) ನಾಯಕರ ನಡುವೆ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT