ಪ್ರಕಾಶ್ ಸಿಂಗ್ ಬಾದಲ್ 
ದೇಶ

ನನ್ನ ಕೊನೆ ಉಸಿರಿರುವವರೆಗೆ ಬಿಜೆಪಿ-ಎಸ್ಎಡಿ ಮೈತ್ರಿ ಉಸಿರು ನಿಲ್ಲುವುದಿಲ್ಲ: ಪಂಜಾಬ್ ಸಿಎಂ ಪರ್‌ಕಾಶ್ ಸಿಂಗ್ ಬಾದಲ್

ತಮ್ಮ ಕೊನೆಯ ಉಸಿರು ಇರುವವರೆಗೆ ಮೈತ್ರಿಗೆ ಅಪಾಯವಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿಪರ್‌ಕಾಶ್ ಸಿಂಗ್ ಬಾದಲ್ ಹೇಳಿದ್ದಾರೆ.

ಪಂಜಾಬ್: ಪಂಜಾಬ್ ನಲ್ಲಿ ಬಿಜೆಪಿ- ಎಸ್ಎಡಿ ಮೈತ್ರಿ ತ್ವತ್ವದ ಆಧಾರದಲ್ಲಿ ನಡೆಯುತ್ತಿದ್ದು, ತಮ್ಮ ಕೊನೆಯ  ಉಸಿರು ಇರುವವರೆಗೆ ಮೈತ್ರಿಗೆ ಅಪಾಯವಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಪರ್‌ಕಾಶ್ ಸಿಂಗ್ ಬಾದಲ್  ಹೇಳಿದ್ದಾರೆ.

ನಾನು ಉಸಿರಾಡುವವರೆಗೂ ಬಿಜೆಪಿ-ಎಸ್ಎಡಿ ಮೈತ್ರಿ ಉಸಿರು ನಿಲ್ಲುವುದಿಲ್ಲ. ಪಂಜಾಬ್ ನಲ್ಲಿ ಬಿಜೆಪಿ-ಎಸ್ಎಡಿ ಮೈತ್ರಿ ಕೇವಲ ರಾಜಕೀಯ ಮೈತ್ರಿಯಲ್ಲ, ಅದು ತತ್ವದ ಆಧಾರದಲ್ಲಿರುವ ಮೈತ್ರಿ ಎಂದು ಪ್ರಕಾಶ್ ಸಿಂಗ್ ಬಾದಲ್ ಅಭಿಪ್ರಾಯಪಟ್ಟಿದ್ದಾರೆ. ಮೈತ್ರಿಕೂಟದ ಕೆಲವು ನಾಯಕರ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿದ ವೇಳೆ ಬಾದಲ್ ಈ ಹೇಳಿಕೆ ನೀಡಿದ್ದಾರೆ.  
 
 ಪಂಜಾಬ್ ಮೆಡಿಕಲ್ ಕೌನ್ಸಿಲ್ ಅಧ್ಯಕ್ಷ ಸ್ಥಾನದಿಂದ ಮುಖ್ಯಮಂತ್ರಿಯವರ ಸಲಹೆಗಾರ ಮಹೇಶ್ ಇಂದ್ರ  ಸಿಂಗ್ ಗ್ರೆವಲ್ ಅವರ ಸಹೋದರನನ್ನು ವೈಧ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಚಿವ ಅನಿಲ್ ಜೋಶಿ ವಜಾಗೊಳಿಸಿರುವುದು ರಾಜಕೀಯ ತಿರುವು ಪಡೆದಿದ್ದು ಬಿಜೆಪಿ- ಶಿರೋಮಣಿ ಅಖಾಲಿ ದಳ(ಎಸ್ಎಡಿ) ನಾಯಕರ ನಡುವೆ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT