ಹಲಿ ಉಪ ಮುಖ್ಯಂತ್ರಿ ಮನೀಶ್ ಸಿಸೋಡಿಯಾ (ಸಂಗ್ರಹ ಚಿತ್ರ) 
ದೇಶ

ಮಸಿ ಹಿಂದೆ ಬಿಜೆಪಿ ಕೈವಾಡವಿದೆ: ಮನೀಶ್ ಸಿಸೋಡಿಯಾ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮೇಲೆ ಮಸಿ ಬಳಿದಿರುವ ಘಟನೆ ಹಿಂದೆ ಬಿಜೆಪಿ ನಾಯಕರ ಕೈವಾಡವಿದೆ ಎಂದು ದೆಹಲಿ ಉಪ ಮುಖ್ಯಂತ್ರಿ ಮನೀಶ್ ಸಿಸೋಡಿಯಾ ಅವರು ಆರೋಪ ವ್ಯಕ್ತಪಡಿಸಿದ್ದಾರೆ...

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮೇಲೆ ಮಸಿ ಬಳಿದಿರುವ ಘಟನೆ ಹಿಂದೆ ಬಿಜೆಪಿ ನಾಯಕರ ಕೈವಾಡವಿದೆ ಎಂದು ದೆಹಲಿ ಉಪ ಮುಖ್ಯಂತ್ರಿ ಮನೀಶ್ ಸಿಸೋಡಿಯಾ ಅವರು ಆರೋಪ ವ್ಯಕ್ತಪಡಿಸಿದ್ದಾರೆ.

ನಿನ್ನೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸಮ-ಬೆಸ ನಿಯಮ ಯಶಸ್ಸು ಕಾಣಲು ಕಾರಣರಾದ ದೆಹಲಿ ಜನರಿಗೆ ಧನ್ಯವಾದ ಹೇಳುವ ಸಲುವಾಗಿ ಚತ್ರಸಾಲ್ ಸ್ಟೇಡಿಯಂನಲ್ಲಿ ಸಾರ್ವಜನಿಕ ಸಭೆಯೊಂದನ್ನು ಏರ್ಪಡಿಸಿದ್ದರು. ಸಭೆಯನ್ನುದ್ದೇಶಿಸಿ ಕೇಜ್ರಿವಾಲ್ ಅವರು ಮಾತನಾಡಿದ್ದ ವೇಳೆ ಇದ್ದಕ್ಕಿದ್ದಂತೆ ಬಂದ ಮಹಿಳೆಯೊಬ್ಬಳು ಅವರ ಮೇಲೆ ಮಸಿ ಹಾಗೂ ಕೆಲವು ಪೇಪರ್ ಗಳನ್ನು ಎಸೆದು ತನ್ನ ಆಕ್ರೋಶವನ್ನು ವ್ಯಕ್ತಪಡಿಸಿದ್ದಳು.

ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಮನೀಶ್ ಸಿಸೋಡಿಯಾ ಅವರು, ಇದೊಂದು ಗಂಭೀರವಾದ ವಿಚಾರವಾಗಿದೆ. ಘಟನೆ ಹಿಂದೆ ಬಿಜೆಪಿ ನಾಯಕರ ಕೈವಾಡವಿದೆ. ಬಿಜೆಪಿಯವರು ದೆಹಲಿ ಪೊಲೀಸರ ಸಹಾಯದಿಂದ ಈ ಕೃತ್ಯವೆಸಗಿರುವುದಾಗಿ ಅನುಮಾನಗಳು ವ್ಯಕ್ತವಾಗುತ್ತಿದೆ. ಇಂತಹ ಸಂದರ್ಭಗಳ ಪ್ರಯೋಜನ ಪಡೆಯಲು ಬಿಜೆಪಿ ಯಾವಾಗಲೂ ಬಯಸುತ್ತದೆ. ಕೇಜ್ರಿವಾಲ್ ಮತ್ತು ಇಡೀ ಸಂಪುಟದ ಮೇಲೆ ದಾಳಿ ನಡೆಸಲು ಬಿಜೆಪಿ ಬಯಸುತ್ತದೆ. ಸಮ-ಬೆಸ ನಿಯಮದ ಯಶಸ್ಸು ಹಾಗೂ ಜನರ ಬಳಿ ಆಮ್ ಆದ್ಮಿ ಪಕ್ಷ ಜನಪ್ರಿಯತೆ ಹೊಂದುತ್ತಿರುವುದನ್ನು ಬಿಜೆಪಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ಬಿಜೆಪಿ ಜನರನ್ನು ಕೊಲ್ಲಲೂಬಹುದು ಎಂದು ಹೇಳಿದ್ದಾರೆ.

ಅಲ್ಲದೆ, ಘಟನೆ ಕುರಿತಂತೆ ದೆಹಲಿ ಪೊಲೀಸರ ವಿರುದ್ಧ ಹರಿಹಾಯ್ದಿರುವ ಅವರು, ಘಟನೆ ನಡೆಯುತ್ತಿದ್ದರೂ ದೆಹಲಿ ಪೊಲೀಸರು ವೀಕ್ಷಕರಂತೆ ನೋಡುತ್ತಲೇ ನಿಂತಿದ್ದರು. ಇದೊಂದು ದೆಹಲಿ ಪೊಲೀಸರ ಭದ್ರತಾ ವೈಫಲ್ಯ. ಒಂದು ವೇಳೆ ಇದು ಬಾಂಬ್ ಅಥವಾ ಆ್ಯಸಿಡ್ ದಾಳಿಯಾಗಿದ್ದರೆ ಇದರ ಪರಿಣಾಮ ಏನಾಗುತ್ತಿತ್ತು. ಕೇಜ್ರಿವಾಲ್ ಮೇಲೆ ದಾಳಿ ಆಗಲಿ ಎಂದು ಪೊಲೀಸರು ಎದುರು ನೋಡುತ್ತಿದ್ದರೇ? ಭದ್ರತೆ ಒದಗಿಸುವ ದೆಹಲಿ ಪೊಲೀಸರು ಎಲ್ಲಿ ಹೋಗಿದ್ದರು? ಸಾವಿರಾರು ಜನ ಸೇರುವ ಕಾರ್ಯಕ್ರಮದ ಬಗ್ಗೆ ಅವರಿಗೆ ಕಾಳಜಿಯೇ ಇಲ್ಲ. ಕಾರ್ಯಕ್ರಮದ ವೇಳೆ ಯಾವುದೇ ತಪಾಸಣೆ ನಡೆಸಿರಲಿಲ್ಲ. ಸಾರ್ವಜನಿಕರ ಭದ್ರತೆ ಬಗ್ಗೆ ಪೊಲೀಸರಿ ಕಾಳಜಿ ಇಲ್ಲ.

ಮಸಿ ಎರಚಿದ ನಂತರ ಯುವತಿ ಮಾಧ್ಯಮಗಳ ಬಳಿ ಮಾತನಾಡಲು ಸಾಧ್ಯ ಹೇಗೆ ಆಯಿತು. ಈ ಎಲ್ಲಾ ಬೆಳವಣಿಗೆಯನ್ನು ಗಮನಿಸಿದರೆ ಘಟನೆ ಹಿಂದೆ ಬಿಜೆಪಿ ನಾಯಕರ ಷಡ್ಯಂತರ ಇರುವುದು ಖಚಿತವಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT