ದೇಶ

ವಿಷ್ಣು ಅವತಾರದಲ್ಲಿ ಕಾಣಿಸಿಕೊಂಡ ಗುರ್ಮೀತ್ ರಾಮ್ ರಹಿಮ್ ವಿರುದ್ಧ ಕೇಸ್

Lingaraj Badiger
ಚಂಡಿಗಢ: ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ನಂತರ ಇದೀಗ ದೇರಾ ಸಚ್ಚಾ ಸೌದಾ ನಾಯಕ ಗುರ್ಮೀತ್ ರಾಮ್ ರಹಿಮ್ ಅವರು ವಿಷ್ಣು ಅವತಾರದಲ್ಲಿ ಕಾಣಿಸಿಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಗರ್ಮೀತ್ ರಾಮ್ ರಹಿಮ್ ಅವರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ವಿಡಿಯೋವೊಂದರಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಆರೋಪಿಸಿ ಅಖಿಲ ಭಾರತ ಹಿಂದು ವಿದ್ಯಾರ್ಥಿ ಒಕ್ಕೂಟ ಮೊಹಲಿ ಪೊಲೀಸರಿಗೆ ದೂರು ನೀಡಿದೆ.
ಪ್ರಕರಣ ದಾಖಲಿಸಿಕೊಂಡಿರುವ ಮೊಹಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ವಿಷ್ಣು ಅವತಾರದಲ್ಲಿ ಕಾಣಿಸಿಕೊಂಡಿದ್ದ ಮಹೇಂದ್ರ ಸಿಂಗ್ ಧೋನಿ ವಿರುದ್ಧ ಅನಂತ್‌ಪುರ ಕೋರ್ಟ್ ಜಾಮೀನು ರಹಿತ ವಾರಂಟ್ ಜಾರಿ ಮಾಡಿತ್ತು.
SCROLL FOR NEXT