ಲಾಲೂ ಪ್ರಸಾದ್ ಯಾದವ್ 
ದೇಶ

ಆರ್‌ಜೆಡಿ ಅಧ್ಯಕ್ಷರಾಗಿ 9ನೇ ಬಾರಿ ಲಾಲೂ ಆಯ್ಕೆ

ರಾಷ್ಟ್ರೀಯ ಜನತಾ ದಳದ (ಆರ್ ಜೆ ಡಿ) ಅಧ್ಯಕ್ಷರಾಗಿ ಲಾಲೂ ಪ್ರಸಾದ್ ಅವರನ್ನು ಆಯ್ಕೆ ಮಾಡಲಾಗಿದೆ. ಸತತ 9 ನೇ ಬಾರಿ ಲಾಲೂ ಆರ್‌ಜೆಡಿ...

ಪಟನಾ: ರಾಷ್ಟ್ರೀಯ ಜನತಾ ದಳದ (ಆರ್ ಜೆ ಡಿ) ಅಧ್ಯಕ್ಷರಾಗಿ ಲಾಲೂ ಪ್ರಸಾದ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದೆ. ಸತತ 9 ನೇ ಬಾರಿ ಲಾಲೂ ಆರ್‌ಜೆಡಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದ್ದಾರೆ.
ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ನಂತರ ಮಾತನಾಡಿದ ಲಾಲೂ, ಪ್ರಧಾನಿ ಮೋದಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 
56 ಇಂಚಿನ ಎದೆಯ ಮೋದಿ, ಗಡಿ ದಾಟಿ ದೇಶದ ತಂಟೆಗೆ ಬಂದರೆ ಕಣ್ಣಿಗೆ ಕಣ್ಣು ಕೀಳುತ್ತೇವೆ ಎಂದು ಅಬ್ಬರಿಸಿದ್ದರು. ಆದರೆ ಈಗ ಪಾಕಿಸ್ತಾನದ ಉಗ್ರರು ಪಠಾಣ್ ಕೋಟ್ ಮೇಲೆ ದಾಳಿ ನಡೆಸಿ ನಮ್ಮ ಸೈನಿಕರನ್ನು ಹತ್ಯೆಗೈದಾಗ ಸುಮ್ಮನಿರುವುದು ಯಾಕೆ?. ಬಿಜೆಪಿಯ ಕೈಯಲ್ಲಿರುವ ನಮ್ಮ ದೇಶ ಸುರಕ್ಷಿತವಾಗಿಲ್ಲ. ಆದ್ದರಿಂದ ಜಾತ್ಯಾತೀತ ಪಕ್ಷಗಳೆಲ್ಲಾ ಮತ್ತೆ ಒಂದಾಗಬೇಕೆಂದು ಲಾಲೂ ಹೇಳಿದ್ದಾರೆ.
ಬಿಹಾರದಲ್ಲಿ ನಿತೀಶ್ ಕುಮಾರ್ ಜಯಭೇರಿ ಬಾರಿಸಿ ಅಧಿಕಾರಕ್ಕೇರಿದ್ದರು. ಆದರೆ ನನ್ನ ಮತ್ತು ನಿತೀಶ್ ಕುಮಾರ್ ನಡುವಿನ ಮೈತ್ರಿಯಲ್ಲಿ ಬಿಜೆಪಿ ಹುಳಿ ಹಿಂಡಲು ಯತ್ನಿಸುತ್ತಿದೆ. ಆದರೆ ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಲಾಲೂ ನುಡಿದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT