ಪಟನಾ: ರಾಷ್ಟ್ರೀಯ ಜನತಾ ದಳದ (ಆರ್ ಜೆ ಡಿ) ಅಧ್ಯಕ್ಷರಾಗಿ ಲಾಲೂ ಪ್ರಸಾದ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದೆ. ಸತತ 9 ನೇ ಬಾರಿ ಲಾಲೂ ಆರ್ಜೆಡಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದ್ದಾರೆ.
ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ನಂತರ ಮಾತನಾಡಿದ ಲಾಲೂ, ಪ್ರಧಾನಿ ಮೋದಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
56 ಇಂಚಿನ ಎದೆಯ ಮೋದಿ, ಗಡಿ ದಾಟಿ ದೇಶದ ತಂಟೆಗೆ ಬಂದರೆ ಕಣ್ಣಿಗೆ ಕಣ್ಣು ಕೀಳುತ್ತೇವೆ ಎಂದು ಅಬ್ಬರಿಸಿದ್ದರು. ಆದರೆ ಈಗ ಪಾಕಿಸ್ತಾನದ ಉಗ್ರರು ಪಠಾಣ್ ಕೋಟ್ ಮೇಲೆ ದಾಳಿ ನಡೆಸಿ ನಮ್ಮ ಸೈನಿಕರನ್ನು ಹತ್ಯೆಗೈದಾಗ ಸುಮ್ಮನಿರುವುದು ಯಾಕೆ?. ಬಿಜೆಪಿಯ ಕೈಯಲ್ಲಿರುವ ನಮ್ಮ ದೇಶ ಸುರಕ್ಷಿತವಾಗಿಲ್ಲ. ಆದ್ದರಿಂದ ಜಾತ್ಯಾತೀತ ಪಕ್ಷಗಳೆಲ್ಲಾ ಮತ್ತೆ ಒಂದಾಗಬೇಕೆಂದು ಲಾಲೂ ಹೇಳಿದ್ದಾರೆ.
ಬಿಹಾರದಲ್ಲಿ ನಿತೀಶ್ ಕುಮಾರ್ ಜಯಭೇರಿ ಬಾರಿಸಿ ಅಧಿಕಾರಕ್ಕೇರಿದ್ದರು. ಆದರೆ ನನ್ನ ಮತ್ತು ನಿತೀಶ್ ಕುಮಾರ್ ನಡುವಿನ ಮೈತ್ರಿಯಲ್ಲಿ ಬಿಜೆಪಿ ಹುಳಿ ಹಿಂಡಲು ಯತ್ನಿಸುತ್ತಿದೆ. ಆದರೆ ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಲಾಲೂ ನುಡಿದಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos