ಶಬರಿಮಲೆ 
ದೇಶ

ಶಬರಿಮಲೆಯಲ್ಲಿ ಮಹಿಳೆಯರಿಗೆ ಪ್ರವೇಶ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದ ನ್ಯಾಯವಾದಿಗೆ ಕಾನೂನು ರಕ್ಷಣೆ

ಶಬರಿಮಲೆಯಲ್ಲಿ ಮಹಿಳೆಯರಿಗೆ ಪ್ರವೇಶ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದ ನ್ಯಾಯವಾದಿ ನೌಶಾದ್ ಅಹಮದ್ ಖಾನ್ ಅವರಿಗೆ ಸುಪ್ರೀಂಕೋರ್ಟ್

ನವದೆಹಲಿ: ಶಬರಿಮಲೆಯಲ್ಲಿ ಮಹಿಳೆಯರಿಗೆ ಪ್ರವೇಶ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದ ನ್ಯಾಯವಾದಿ ನೌಶಾದ್ ಅಹಮದ್ ಖಾನ್ ಅವರಿಗೆ ಸುಪ್ರೀಂಕೋರ್ಟ್ ಕಾನೂನಿನ ಅಭಯ ನೀಡಿದೆ.
ಮಹಿಳೆಯರಿಗೆ ಶಬರಿಮಲೆಯಲ್ಲಿ ಪ್ರವೇಶ ನೀಡಬೇಕೆಂದು ಅರ್ಜಿ ಸಲ್ಲಿಸಿದ ನಂತರ ನೌಶಾದ್ ಅವರಿಗೆ ಬೆದರಿಕೆ ಕರೆಗಳು ಬರತೊಡಗಿದ್ದವು. ಈ ಹಿನ್ನೆಲೆಯಲ್ಲಿ ನೌಶಾದ್ ಅವರಿಗೆ ಪೊಲೀಸ್ ರಕ್ಷಣೆ ನೀಡುವಂತೆ ಮತ್ತು ಆ ಬಗ್ಗೆ ದೆಹಲಿ ಪೊಲೀಸ್ ಕಮಿಷನರ್ ವರದಿ ಸಲ್ಲಿಸುವಂತೆ ಕೋರ್ಟ್ ಆದೇಶಿಸಿದೆ. 
ಆದಾಗ್ಯೂ, ಸಾಮಾಜಿಕ ತಾಣದಲ್ಲಿ ನೌಶಾದ್ ಬಗ್ಗೆ ನಡೆಯುತ್ತಿರುವ ಚರ್ಚೆಗಳೋ, ಇತರ ಯಾವುದೇ ಕ್ರಿಯೆಗಳ ಬಗ್ಗೆ ನ್ಯಾಯಾಲಯ ಮಧ್ಯಪ್ರವೇಶಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಸಾಮಾಜಿಕ ತಾಣ ಮತ್ತು ಫೋನ್ ಮೂಲಕ ನೌಶಾದ್ ಅವರಿಗೆ ಬೆದರಿಕೆಗಳು ಬಂದಿದ್ದವು. ಈ ಬೆದರಿಕೆಗಳನ್ನು ನೀಡಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸುಪ್ರೀಂ ನೌಶಾದ್ ಅವರಿಗೆ ಭರವಸೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT