ಡಿಎಂಕೆ ವರಿಷ್ಠ ಕರುಣಾನಿಧಿ 
ದೇಶ

ನ್ಯಾಯಾಲಯಕ್ಕೆ ಹಾಜರಾದ ಕರುಣಾನಿಧಿ

ಡಿಎಂಕೆ ಮುಖವಾಣಿಯಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಅವಹೇಳನಕಾರಿ ಲೇಖನ ಬರೆದಿದ್ದಾರೆ ಎಂಬ ಆರೋಪದ ಮೇಲೆ ಸಿಎಂ ಜಯಲಲಿತಾ ಹೂಡಿದ್ದ ಮಾನನಷ್ಟ ಮೊಕದ್ದಮೆ ವಿಚಾರಣೆ ಸೋಮವಾರ ನಡೆಯಿತು...

ಚೆನ್ನೈ: ಡಿಎಂಕೆ ಮುಖವಾಣಿಯಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಅವಹೇಳನಕಾರಿ ಲೇಖನ ಬರೆದಿದ್ದಾರೆ ಎಂಬ ಆರೋಪದ ಮೇಲೆ ಸಿಎಂ ಜಯಲಲಿತಾ ಹೂಡಿದ್ದ ಮಾನನಷ್ಟ ಮೊಕದ್ದಮೆ ವಿಚಾರಣೆ ಸೋಮವಾರ ನಡೆಯಿತು.

ಚೆನ್ನೈನ ಪ್ರಿನ್ಸಿಪಾಲ್ ಸೆಷನ್ಸ್ ಕೋರ್ಟ್‍ನಲ್ಲಿ ನಡೆದ ವಿಚಾರಣೆಗೆ ಡಿಎಂಕೆ ವರಿಷ್ಠ ಕರುಣಾನಿಧಿ ಹಾಜರಾಗಿದ್ದರು. 92 ವರ್ಷದ ನಾಯಕ ಗಾಲಿ ಕುರ್ಚಿಯಲ್ಲಿ ಆಗಮಿಸಿದರು. ನ್ಯಾಯಾಧೀಶ ಎನ್.ಆದಿನಾಥನ್ 1 ನಿಮಿಷದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರುಣಾನಿಧಿ ಹೇಳಿಕೆ ಪಡೆದುಕೊಂಡು ಮಾ.10ಕ್ಕೆ ವಿಚಾರಣೆ ಮುಂದೂಡಿದರು.

ಕರುಣಾನಿಧಿ ಪುತ್ರ ಎಂ.ಕೆ.ಸ್ಟಾಲಿನ್, ಪುತ್ರಿ ಕನಿಮೋಳಿ, ಡಿಎಂಕೆ ನಾಯಕರಾದ ಟಿ.ಆರ್. ಬಾಲು, ದಯಾನಿಧಿ ಮಾರನ್, ಇತರರು ಕೋರ್ಟ ಲ್ಲಿ ಉಪಸ್ಥಿತರಿದ್ದರು. ವಿಚಾರಣೆ ಬಳಿಕ ಮಾತನಾ ಡಿದ ಹಿರಿಯ ನಾಯಕ ``ನಾನು ಹೇಳುವುದಕ್ಕೇನೂ ಇಲ್ಲ. ನ್ಯಾಯಾಲಯ ಅದರದ್ದೇ ಆದ ತೀರ್ಮಾನ ಕೈಗೊಳ್ಳಲಿದೆ. ನ್ಯಾಯದ ಹಿಂದೆ ಜನರಿದ್ದಾರೆ'' ಎಂದರು. ಸದ್ಯವೇ ಚುನಾವಣೆ ನಡೆವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮಹತ್ವ ಪಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT