ರೋಹಿತ್ ವೇಮುಲ 
ದೇಶ

ರೋಹಿತ್ ವೇಮುಲ ಪ್ರಕರಣ: ಆಡಳಿತ ಮಂಡಳಿ ಸದಸ್ಯತ್ವಕ್ಕೆ 10 ಪ್ರೊಫೆಸರ್ ಗಳ ರಾಜೀನಾಮೆ

ಸಂಶೊಧನಾ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ,ದಲಿತ ಸಮುದಾಯಕ್ಕೆ ಸೇರಿದ 10 ಪ್ರೊಫೆಸರ್​ಗಳು ವಿಶ್ವವಿದ್ಯಾಲಯದ...

ಹೈದರಾಬಾದ್: ಸಂಶೊಧನಾ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ,ದಲಿತ ಸಮುದಾಯಕ್ಕೆ ಸೇರಿದ 10 ಪ್ರೊಫೆಸರ್​ಗಳು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯತ್ಯಕ್ಕೆ ರಾಜೀನಾಮೆ ನೀಡಿದ್ದಾರೆ.

ರೋಹಿತ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರತಿಭಟನೆಗಳು ಹೆಚ್ಚುತ್ತಿದ್ದು, ಪ್ರೊಫೆಸರ್​ಗಳು ಸಹ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಸತ್ಯವನ್ನು ಮರೆ ಮಾಚುತ್ತಿದ್ದಾರೆ ಎಂದು ಪ್ರೊಫೆಸರ್​ಗಳು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ವೇಮುಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮತಿ ಇರಾನಿ ಅವರು "ಸೃಷ್ಟಿ ಸಿರುವ ಹೇಳಿಕೆ'ಯನ್ನು ವಿರೋಧಿಸಿ ಈ ಪ್ರೊಫೆಸರ್‌ಗಳು ರಾಜೀನಾಮೆ ಮೂಲಕ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ.

ರೋಹಿತ್​ನನ್ನು ಅಮಾನತು ಮಾಡಿದ ಸಮಿತಿಯಲ್ಲಿ ದಲಿತ ಪ್ರೊಫೆಸರ್ ಸಹ ಇದ್ದರು ಎಂಬ ಸಚಿವರ ಹೇಳಿಕೆಯನ್ನು ವಿಶ್ವವಿದ್ಯಾಲಯದ ಎಸ್​ಸಿ/ಎಸ್​ಸಿ ಟೀಚರ್ಸ್ ಮತ್ತು ಆಫೀಸರ್ಸ್ ಫೋರಮ್ ನಿರಾಕರಿಸಿದೆ. ಮೇಲ್ವರ್ಗದ ಪ್ರೊಫೆಸರ್ ಒಬ್ಬರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಸಮಿತಿಯಲ್ಲಿ ದಲಿತರು ಯಾರೂ ಇರಲಿಲ್ಲ ಎಂದು ತಿಳಿಸಿದೆ.

ನಮ್ಮ ವಿದ್ಯಾರ್ಥಿಗಳ ವಿರುದ್ಧ ಹೂಡಲಾಗಿರುವ ಪೊಲೀಸ್‌ ಕೇಸುಗಳನ್ನು ಹಾಗೂ ವಿದ್ಯಾರ್ಥಿಗಳ ಮೇಲಿನ ಅಮಾನತು ಆದೇಶವನ್ನು ತತ್‌ಕ್ಷಣವೇ ಹಿಂಪಡೆಯಬೇಕೆಂದು ನಾವು ಆಗ್ರಹಿಸುತ್ತೇವೆ' ಎಂದು ಪ್ರೊಫೆಸರ್‌ಗಳು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT