ಸುಬ್ರಹ್ಮಣಿಯನ್ ಸ್ವಾಮಿ 
ದೇಶ

ಹೈದರಾಬಾದ್ ವಿವಿಯಲ್ಲಿ ಪ್ರತಿಭಟನೆ: ಪ್ರಜಾಪ್ರಭುತ್ವದ ತತ್ವ ಪಾಲಿಸದ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ವಾಮಿ ಆಗ್ರಹ

ಪ್ರಜಾಪ್ರಭುತ್ವದ ತತ್ವಗಳನ್ನು ಪಾಲಿಸದ ವಿದ್ಯಾರ್ಥಿಗಳ ವಿರುದ್ಧ ವಿಶ್ವ ವಿದ್ಯಾನಿಲಯ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ.

ನವದೆಹಲಿ: ಹೈದರಾಬಾದ್ ವಿಶ್ವವಿದ್ಯಾನಿಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೆಮುಲಾ ಆತ್ಮಹತ್ಯೆ ಪ್ರಕರಣವನ್ನಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ತತ್ವಗಳನ್ನು ಪಾಲಿಸುತ್ತಿಲ್ಲವಾದ್ದರಿಂದ ಅವರ ವಿರುದ್ಧ ವಿಶ್ವ ವಿದ್ಯಾನಿಲಯ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ.
ವಿಶ್ವವಿದ್ಯಾನಿಲಯ ಇರುವುದು ಅಧ್ಯಯನಕ್ಕಾಗಿ, ಬಿಡುವಿನ ಸಮಯದಲ್ಲಿ ಪ್ರತಿಭಟನೆ ನಡೆಸಬಹುದು, ಆದರೆ ಅಧ್ಯಯನದಲ್ಲಿ ಆಸಕ್ತಿಯೇ ಇಲ್ಲದ ವಿದ್ಯಾರ್ಥಿಗಳು ಬೇರೆಡೆಗೆ ಹೋಗಬಹುದು, ತರಗತಿಗಳಿಗೆ ಹಾಜರಾಗಲು ಇಷ್ಟವಿಲ್ಲದವರನ್ನು ವಿಶ್ವವಿದ್ಯಾನಿಲಯದಿಂದ ಹೊರಹಾಕಬೇಕು ಎಂದು ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ನತದೃಷ್ಟ ವಿದ್ಯಾರ್ಥಿಯನ್ನು ಹಾಸ್ಟೆಲ್ ನಿಂದ ಹೊರಹಾಕಲಾಗಿತ್ತು ಆದರೆ ತರಗತಿಗಳಿಗೆ ಹಾಜರಾಗುವುದು, ಗ್ರಂಥಾಲಯಕ್ಕೆ ಪ್ರವೇಶಿಸುವುದರಿಂದ ಅಮಾನತುಗೊಳಿಸಲಾಗಿರಲಿಲ್ಲ. ಅಮಾನತು ಮಾಡುವುದೆಂದರೆ ಉಚ್ಚಾಟನೆ ಅಲ್ಲ ಎಂದು ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ.   
ವಿಶ್ವವಿದ್ಯಾನಿಳಯದಲ್ಲಿರುವ ದೇಶವಿರೋಧಿ ಪಡೆಗಳನ್ನು ಗುರುತಿಸಬೇಕು, ಪ್ರಜಾಪ್ರಭುತ್ವದ ತತ್ವಗಳನ್ನು ಪಾಲಿಸದ ವಿದ್ಯಾರ್ಥಿಗಳ ವಿರುದ್ಧ ವಿಶ್ವವಿದ್ಯಾನಿಲಯ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸುಬ್ರಹ್ಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT