ಸಾಂದರ್ಭಿಕ ಚಿತ್ರ 
ದೇಶ

ಗಂಡ ಮಾಡಿದ ಸಾಲ ತೀರಿಸಲು ಹೆಂಡತಿಯನ್ನು ಸೆಕ್ಸ್ ಗೆ ಒತ್ತಾಯಿಸಿದ ಪಂಚಾಯಿತಿ!

ಗಂಡ ಮಾಡಿದ ಆರು ಲಕ್ಷ ರೂಪಾಯಿ ಸಾಲವನ್ನ ತೀರಿಸಲು ವಿಫಲವಾದ್ದರಿಂದ, ಪಂಚಾಯಿತಿಯು ಆತನ ಹೆಂಡತಿಯಿಂದ ಲೈಂಗಿಕ ಸುಖ ನೀಡುವಂತೆ ....

ಮುಂಬಯಿ:  ಗಂಡ ಮಾಡಿದ ಆರು ಲಕ್ಷ ರೂಪಾಯಿ ಸಾಲವನ್ನ ತೀರಿಸಲು ವಿಫಲವಾದ್ದರಿಂದ, ಪಂಚಾಯಿತಿಯು ಆತನ ಹೆಂಡತಿಯಿಂದ ಲೈಂಗಿಕ ಸುಖ ನೀಡುವಂತೆ ಒತ್ತಾಯಿಸಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ಫರ್ಬಾನಿ ಗ್ರಾಮದಲ್ಲಿ ನಡೆದಿದೆ.

ಮರಾಠವಾಡಾ ದ ಪರ್ಭನಿ ಜಿಲ್ಲೆಯ ಸೆಳು ಎಂಬ ಗ್ರಾಮದ ವಾಸಿಗಳಾಗಿರುವ ದಂಪತಿ ದೀಪಕ್‌ ಭೋರೆ ಮತ್ತು ಆತನ ಪತ್ನಿ ಕಿರುಕುಳಕ್ಕೆ ಒಳಗಾದವರು. ಈ ಸಮುದಾಯದ ಜಾತಿ ಪಂಚಾಯತ್‌ನಿಂದ ದೀಪಕ್‌ ಭೋರೆ 9 ಲಕ್ಷ ರೂ. ಸಾಲ ಪಡೆದಿದ್ದ. ಈ ಪೈಕಿ 2.5 ಲಕ್ಷ ರೂ.ಗಳನ್ನು ಆತ ಮರು ಪಾವತಿಸಿದ್ದ. ಬಾಕಿ ಸಾಲ ತೀರಿಕೆಗಾಗಿ ಆರು ಲಕ್ಷ ರೂ.ಗಳನ್ನು ಒಂದೇ ಬಾರಿ ಕೊಡಬೇಕು ಎಂದು ಜಾತಿ ಪಂಚಾಯತ್‌ನ ಪಂಚರು ಆಗ್ರಹಿಸಿದ್ದರು. ಆದರೆ ಇದಕ್ಕೆ ದೀಪಕ್ ನಿರಾಕರಿಸಿದ್ದರು.

ಇದರಿಂದ ಕೋಪಗೊಂಡ ಪಂಚರು ದೀಪಕ್‌ ಭೋರೆ ಇಲ್ಲದಿದ್ದಾಗ ಆತನ ಮನೆಗೆ ನುಗ್ಗಿ ಆತನ ಪತ್ನಿಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದರು. ಪತಿಯ ಸಾಲ ತೀರಿಸಲು ನೀನು ನಮಗೆ ಲೈಂಗಿಕ ಸುಖ ಕೊಡಬೇಕು ಎಂದವರು ಒತ್ತಾಯಸಿದರು. ಈ ದಂಪತಿಯ ಮೇಲೆ ಜಾತಿ ಬಹಿಷ್ಕಾರ ಹಾಕಿರುವುದರ ಸಂಕೇತವಾಗಿ ಪಂಚನೊಬ್ಬ ತನ್ನ ಚಪ್ಪಲಿಯನ್ನು ದೀಪಕ್‌ ಭೋರೆ ಮನೆ ಬಾಗಿಲಿಗೆ ಕಟ್ಟಿದ್ದ.

ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಮುಂದಿನ ಅಪಾಯವನ್ನು ತಿಳಿದ ದೀಪಕ್‌ ಭೋರೆ ಮತ್ತು ಆತನ ಪತ್ನಿ ಒಡನೆಯೇ ನಾಶಿಕ್‌ಗೆ ತೆರಳಿ ತನ್ನ ತಾಯಿಯ ಅಣ್ಣನಿಗೆ ವಿಷಯ ತಿಳಿಸಿದ. ಅವರು ಕೂಡಲೇ ಎಂಎಎನ್‌ಎಸ್‌ ಕಾರ್ಯಕರ್ತ ಕಷ್ಣ ಚಾಂದ್‌ ಗುಡೆ ಅವರನ್ನು ಭೇಟಿಯಾದರು. ಮಹಾರಾಷ್ಟ್ರದ ಅಂಧಶ್ರದ್ಧಾ ನಿರ್ಮೂಲನ ಸಮಿತಿಯ ಕಾರ್ಯಕರ್ತರ  ಮಧ್ಯ ಪ್ರವೇಶದಿಂದಾಗಿ ಸಂಭವಿಸಬಹುದಾಗಿದ್ದ ಅನಾಹುತ ತಪ್ಪಿದೆ.

ಪರಿಣಾವಾಗಿ ದೀಪಕ್‌ ಭೋರೆಯ ಜಾತಿ ಪಂಚಾಯತ್‌ ನ ಎಲ್ಲ 8 ಪಂಚರು ರಾಜೀನಾಮೆ ನೀಡಿದ್ದಲ್ಲದೆ ಇಡಿಯ ಪಂಚಾಯತನ್ನೇ ರದ್ದುಗೊಳಿಸಿದ್ದಾರೆ. ಈ ದಂಪತಿಯ ಮೇಲೆ ಹೇರಲಾಗಿದ್ದ ಜಾತಿ ಬಹಿಷ್ಕಾರದ ಶಿಕ್ಷೆಯೂ ರದ್ದಾಗಿ ಪ್ರಕರಣ ಸುಖಾಂತ್ಯಗೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT