ಅರುಣ್ ಜೈಟ್ಲಿ ಮತ್ತು ಪಿಯೂಶ್ ಗೋಯೆಲ್ 
ದೇಶ

ಮೋದಿ ಸಂಪುಟ ಪುನಾರಚನೆ, ಜೇಟ್ಲಿಗೆ ರಕ್ಷಣಾ ಖಾತೆ, ಪಿಯೂಶ್ ಗೋಯೆಲ್ ಗೆ ಹಣಕಾಸು?

ಪ್ರಧಾನಿ ನರೇಂದ್ರ ಮೋದಿ ಸಂಪುಟ ಪುನಾರಚನೆ ಮಾಡಲು ಒಲವು ತೋರಿದ್ದು ಶೀಘ್ರವೇ ಸಂಪುಟ ಪುನಾರಚನೆ ಮಾಡಲಿದ್ದಾರೆ. ಹಣಕಾಸು ಸಚಿವ ಅರುಣ್,,,

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಂಪುಟ ಪುನಾರಚನೆ ಮಾಡಲು ಒಲವು ತೋರಿದ್ದು ಶೀಘ್ರವೇ ಸಂಪುಟ ಪುನಾರಚನೆ ಮಾಡಲಿದ್ದಾರೆ. ಹಣಕಾಸು ಸಚಿವ ಅರುಣ್ ಜೈಟ್ಲಿ ಅವರ ಖಾತೆ ಬದಲಾಗಲಿದ್ದು. ಅವರಿಗೆ ರಕ್ಷಣಾ ಖಾತೆ ಹೊಣೆ ನೀಡುವ ಸಾಧ್ಯತೆಯಿದೆ.

ಹಣಕಾಸು ಸಚಿವರಾಗಿರುವ ಅರುಣ್ ಜೈಟ್ಲಿ ವಿದೇಶಿ ಹೂಡಿಕೆದಾರರಿಗೆ ಮೋದಿ ಅವರ ಸಂದೇಶ ರವಾನಿಸುವ ಜವಾಬ್ದಾರಿ ನಿರ್ವಹಿಸುವಲ್ಲಿ ವಿಫಲವಾಗಿದ್ದಾರೆ. ಹೀಗಾಗಿ ಅವರನ್ನ ಹಣಾಕಾಸು ಇಲಾಖೆ ವಾಪಸ್ ಪಡೆದು ರಕ್ಷಣಾ ಇಲಾಖೆ ಜವಾಬ್ದಾರಿ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸದ್ಯ ಪೆಟ್ರೋಲಿಯಂ ಸಚಿವರಾಗಿರುವ ಪಿಯೂಶ್ ಗೋಯೆಲ್ ಅವರಿಗೆ ಹಣಕಾಸು ಇಲಾಖೆ ನೀಡುವ ಸಾಧ್ಯತೆ ಇದೆ.

ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಆರ್ಥಿಕತೆ ಶೀಘ್ರವಾಗಿ ಬೆಳೆಯಿತು.ಆದರೆ ತೆರಿಗೆ ಮತ್ತು ಭೂ ಸುಧಾರಣೆಗಳಲ್ಲಿ ಕೇಂದ್ರ ಸರ್ಕಾರ ವಿಫಲವಾಯಿತು. 2014ರ ಲೋಕಸಭೆ ಚುನಾವಣೆ ವೇಳೆ ಹೂಡಿಕೆದಾರರಿಗೆ ಮೋದಿ ನೀಡಿದ್ದ ಭರವಸೆಗಳು ಈಡೇರದೇ ಹೂಡಿಕೆದಾರರು ಭ್ರಮ ನಿರಸನಗೊಂಡಿದ್ದಾರೆ.

2017 ರಲ್ಲಿ ಉತ್ತರ ಪ್ರದೇಶ ವಿಧಾನ ಸಭೆ ಚುನಾವಣೆ ನಡೆಯಲಿದೆ. 2019 ರಲ್ಲಿ ಮತ್ತೆ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆಲುವು ಸಾಧಿಸಬೇಕಾದರೇ ಉತ್ತರ ಪ್ರದೇಶ ವಿದಾನ ಸಭೆ ಚುನಾವಣೆಯಲ್ಲಿ ಜಯ ಗಳಿಸುವ ಅವಶ್ಯಕತೆ ಇದೆ. ಹೀಗಾಗಿ ಉತ್ತರ ಪ್ರದೇಶ ಚುನಾವಣೆ ಮೋದಿ ಸರ್ಕಾರಕ್ಕೆ ನಿರ್ಣಾಯಕವಾಗಿದೆ.

ಸರ್ಕಾರದಲ್ಲಿ ವೇಗದ ಬದಲಾವಣೆ ತರಲು ಸಂಪುಟದಲ್ಲಿ ಹೊಸಬರಿಗೆ ಅವಕಾಶ ನೀಡಬೇಕೆಂದು ಮೋದಿ ನಿರ್ಧರಿಸಿದ್ದಾರೆ. ಸಂಪುಟ ಪುನಾರಚನೆ ಮಾಡಲು ಈಗ ಒಳ್ಳೆಯ ಸಮಯವಾಗಿದ್ದು, ಈಗ ಮಾಡದಿದ್ದರೆ ಮುಂದೆ ಕಷ್ಟವಾಗಲಿದೆ ಎಂದು ಹಿರಿಯ ಪತ್ರಕರ್ತರೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT