ರಾಮಚಂದ್ರ ಗುಹ (ಸಂಗ್ರಹ ಚಿತ್ರ) 
ದೇಶ

ಮೋದಿ ಸರ್ಕಾರ ದೇಶ ಹಿಂದೆಂದೂ ಕಾಣದ ಬುದ್ಧಿಜೀವಿ ವಿರೋಧಿ ಸರ್ಕಾರ: ರಾಮಚಂದ್ರ ಗುಹ

ಇತ್ತೀಚಿನ ದಿನಗಳಲ್ಲಿ ನಡೆದ ಖ್ಯಾತ ಬರಹಗಾರರ ಹತ್ಯೆಯನ್ನು ಖಂಡಿಸಿರುವ ಇತಿಹಾಸಕಾರ ಪ್ರೊ.ರಾಮಚಂದ್ರ ಗುಹಾ ಬರಹಗಾರರ ಹತ್ಯೆಯನ್ನು ತಡೆಗಟ್ಟಲು ಮೋದಿ ಸರ್ಕಾರ ವಿಫಲವಾಗಿದೆ ಎಂದು ಹೇಳಿದ್ದಾರೆ.

ಮುಂಬೈ: ಇತ್ತೀಚಿನ ದಿನಗಳಲ್ಲಿ ನಡೆದ ಖ್ಯಾತ ಬರಹಗಾರರ ಹತ್ಯೆಯನ್ನು ಖಂಡಿಸಿರುವ ಇತಿಹಾಸಕಾರ ರಾಮಚಂದ್ರ ಗುಹ ಬರಹಗಾರರ ಹತ್ಯೆಯನ್ನು ತಡೆಗಟ್ಟಲು ನರೇಂದ್ರ ಮೋದಿ ಸರ್ಕಾರ ವಿಫಲವಾಗಿದೆ ಎಂದು ಹೇಳಿದ್ದಾರೆ.

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಉಂಟಾಗುತ್ತಿರುವ ಧಕ್ಕೆಯ ಬಗ್ಗೆ ಆತಂಕ ವ್ಯಕ್ತಪಡಿಸಿರುವ ರಾಮಚಂದ್ರ ಗುಹಾ ಮೋದಿ ಸರ್ಕಾರ ದೇಶ ಕಂಡಂತಹ ಅತ್ಯಂತ ಬುದ್ಧಿಜೀವಿ ವಿರೋಧಿ ಸರ್ಕಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಂಬೈ ವಿಶ್ವವಿದ್ಯಾನಿಲಯದಲ್ಲಿ ಮಾತನಾಡಿದ ರಾಮಚಂದ್ರ ಗುಹಾ ತಮ್ಮ ಅಭಿಪ್ರಾಯಗಳನ್ನು ಹೇಳಿದ್ದಕ್ಕಾಗಿ ನರೇಂದ್ರ ಧಾಬೋಲ್ಕರ್, ಸಿಪಿಐ ನಾಯಕ ಗೋವಿಂದ್ ಪನ್ಸಾರೆ ಹಾಗೂ ಕಲ್ಬುರ್ಗಿ ಅವರನ್ನು ಬಲಪಂಥೀಯ ಗುಂಪಿನವರು ಹತ್ಯೆ ಮಾಡಿದರು. ಈ ಎಲ್ಲಾ ಹತ್ಯೆಗಳನ್ನು ಬಿಜೆಪಿ ಸರ್ಕಾರ ಹಾಗೂ ಕಾಂಗ್ರೆಸ್ ಸರ್ಕಾರಗಳು ತಡೆಗಟ್ಟಬಹುದಿತ್ತು ಎಂದು ಗುಹಾ ಅಭಿಪ್ರಾಯಪಟ್ಟಿದ್ದಾರೆ.

ಎಲ್ಲಾ ರೀತಿಯ ವಿರೋಧಾಭಾಸಗಳನ್ನು ನಿಷೇಧಿಸುತ್ತಾ ಹೋದರೆ ದೇಶ ಅರಾಜಕತೆಯತ್ತ ಸಾಗುತ್ತದೆ ಎಂದಿರುವ ರಾಮಚಂದ್ರ ಗುಹಾ 1980 ರಲ್ಲಿ ರಾಜೀವ್ ಗಾಂಧಿ ಸಲ್ಮಾನ್ ರಶ್ದಿಯ ಸಟಾನಿಕ್ ವರ್ಸಸ್ ಪುಸ್ತಕವನ್ನು ನಿಷೇಧಿಸಿದ್ದನ್ನು ವಿರೋಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT