ನಿತೀಶ್ ಕುಮಾರ್- ಪ್ರಶಾಂತ್ ಕಿಶೋರ್ (ಸಂಗ್ರಹ ಚಿತ್ರ) 
ದೇಶ

ನಿತೀಶ್ ಕುಮಾರ್ ಸಲಹೆಗಾರರಾಗಿ ಪ್ರಶಾಂತ್ ಕಿಶೋರ್ ನೇಮಕ

2015 ರ ಬಿಹಾರ ಚುನಾವಣೆಯಲ್ಲಿ ಜೆಡಿಯು ಮೈತ್ರಿಕೂಟಕ್ಕೆ ದೂರೆತ ಗೆಲುವಿನ ರೂವಾರಿ ಎಂದೇ ಗುರುತಿಸಲಾದ ಪ್ರಶಾಂತ್ ಕಿಶೋರ್ ಗೆ ನಿತೀಶ್ ಕುಮಾರ್ ಸಂಪುಟ ದರ್ಜೆ ಸ್ಥಾನ ನೀಡಿದ್ದಾರೆ.

ಪಾಟ್ನಾ: 2015 ರ ಬಿಹಾರ ಚುನಾವಣೆಯಲ್ಲಿ ಜೆಡಿಯು ಮೈತ್ರಿಕೂಟಕ್ಕೆ ದೂರೆತ ಗೆಲುವಿನ ರೂವಾರಿ ಎಂದೇ ಗುರುತಿಸಲಾದ ಪ್ರಶಾಂತ್ ಕಿಶೋರ್ ಗೆ ನಿತೀಶ್ ಕುಮಾರ್ ಸಂಪುಟ ದರ್ಜೆ ಸ್ಥಾನ ನೀಡಿದ್ದಾರೆ.
ಪ್ರಶಾಂತ್ ಕಿಶೋರ್ ಅವರನ್ನು ಬಿಹಾರ ಮುಖ್ಯಮಂತ್ರಿ ಅವರ ಸಲಹೆಗಾರರಾಗಿ ನೇಮಕ ಮಾಡಿರುವುದರ ಬಗ್ಗೆ ಅಧಿಕೃತ ಆದೇಶ ಹೊರಬಿದ್ದಿದ್ದು, ಪ್ರಶಾಂತ್ ಕಿಶೋರ್ ಅವರಿಗೆ ಸಂಪುಟ ದರ್ಜೆ ಸ್ಥಾನ ನೀಡಲಾಗಿದೆ.
2014 ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರ ಯಶಸ್ಸಿಗೆ ಕಾರಣವಾಗಿದ್ದ ಪ್ರಶಾಂತ್ ಕಿಶೋರ್ 2015 ರ ಬಿಹಾರ ವಿಧಾನಸಭಾ ಚುನಾವಣೆ ವೇಳೆ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷಕ್ಕೆ ಪ್ರಚಾರ  ಕಾರ್ಯತಂತ್ರ ರೂಪಿಸುವ ಜವಾಬ್ದಾರಿ ಹೊತ್ತಿದ್ದರು. ಪ್ರಶಾಂತ್ ಕಿಶೋರ್ ಅವರ ಕಾರ್ಯತಂತ್ರ ಯಶಸ್ವಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಮತ್ತೊಮ್ಮೆ ಅಧಿಕಾರ ಪಡೆಯಲು ಸಹಕಾರಿಯಾಗಿತ್ತು. ಪ್ರಶಾಂತ್ ಕಿಶೋರ್ ಬಿಹಾರದ ಬಕ್ಸರ್ ಮೂಲದವರಾಗಿದ್ದು ಯುಎನ್ ಆರೋಗ್ಯ ತಜ್ಞನ ಕೆಲಸಕ್ಕೆ 2011 ರಲ್ಲಿ ರಾಜೀನಾಮೆ ನೀಡಿ ಭಾರತಕ್ಕೆ ವಾಪಸ್ಸಾಗಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT