ಸಾಂದರ್ಭಿಕ ಚಿತ್ರ 
ದೇಶ

ಮೂರು ತಿಂಗಳ ಹಿಂದೆ ವಿವಾಹವಾಗಿದ್ದ ರೇಡಿಯೋ ಜಾಕಿ ಪತ್ನಿ ಆತ್ಮಹತ್ಯೆ

ಅಹಮದಾಬಾದ್ ನ ರೇಡಿಯೋ ಜಾಕಿ ಕುಣಾಲ್‌ ಎಂಬಾತನನ್ನು ವಿವಾಹವಾಗಿದ್ದ ಭೂಮಿ ದೇಸಾಯಿ ಎಂಬ ಯುವತಿ ಅಪಾರ್ಟ್ ಮೆಂಟ್ ನಿಂದ ಜಿಗಿದು ,,,

ಅಹಮದಾಬಾದ್: ಅಹಮದಾಬಾದ್ ನ ರೇಡಿಯೋ ಜಾಕಿ ಕುಣಾಲ್‌ ಎಂಬಾತನನ್ನು ವಿವಾಹವಾಗಿದ್ದ ಭೂಮಿ ದೇಸಾಯಿ ಎಂಬ ಯುವತಿ ಅಪಾರ್ಟ್ ಮೆಂಟ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

2014ರ  ನವೆಂಬರ್‌ 24ರಂದು  ಭೂಮಿ ದೇಸಾಯಿ ಮತ್ತು ರೇಡಿಯೋ ಜಾಕಿ ಕುನಾಲ್ ದೇಸಾಯಿ ವಿವಾಹವಾಗಿದ್ದರು.  ಕೌಟುಂಬಿಕ ಕಾರಣ ಹಿನ್ನೆಲೆಯಲ್ಲಿ ಆನಂದನಗರ ಪ್ರದೇಶದಲ್ಲಿನ ಹತ್ತು ಮಹಡಿಯ ವಸತಿ ಕಟ್ಟಡದ ಟೆರೇಸ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಭೂಮಿ ದೇಸಾಯಿ ನಗರದ ಶ್ಯಾಮಲಾ ಕ್ರಾಸ್‌ ರಸ್ತೆಯಲ್ಲಿರುವ ಸಚಿನ್‌ ಟವರ್‌ ಗೆ ತನ್ನ ಕಾರಿನಲ್ಲಿ  ಗುರುವಾರ ಮಧ್ಯಾಹ್ನ 2 ಗಂಟೆಯ ಹೊತ್ತಿಗೆ ಬಂದಿದ್ದಳು. ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಮುನ್ನ ಆಕೆ ಮಿತೇಶ್‌ ಸೋನಿ ಎಂಬಾತನಿಗೆ ತನ್ನ ನಿರ್ಧಾರದ ಬಗ್ಗೆ ಎಸ್‌ಎಂಎಸ್‌ ಮಾಡಿದ್ದಾಳೆ. 2.30ರ ಹೊತ್ತಿಗೆ ಸಚಿನ್‌ ಟವರ್ ಟೆರೇಸ್‌ನಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆನಂದನಗರ ಪೊಲೀಸ್‌ ಇನ್ಸ್‌ಪೆಕ್ಟರ್‌ ಪಿ ವಿ ಜಡೇಜಾ ತಿಳಿಸಿದ್ದಾರೆ.

ಕಳೆದ ವಾರ ದಂಪತಿ ನಡುವೆ ಜಗಳ ನಡೆದಿತ್ತು ಎಂದು ಹೇಳಿರುವ ಪೊಲೀಸರು. ಯಾವ ವಿಷಯಕ್ಕಾಗಿ ಜಗಳ ನಡೆದಿದೆ ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ಕುಣಾಲ್ ನನ್ನು ವಿಚಾರಣೆಗೊಳಪಡಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT