ಬಾಂಬ್ ಬೆದರಿಕೆ ಹಿನ್ನಲೆಯಲ್ಲಿ ವಿಮಾನದಲ್ಲಿ ತಪಾಸಣೆ ಮಾಡುತ್ತಿರುವ ಭದ್ರತಾ ಸಿಬ್ಬಂದಿ (ಸಂಗ್ರಹ ಚಿತ್ರ) 
ದೇಶ

ಬಾಂಬ್ ಬೆದರಿಕೆ: ಗೋಏರ್ ವಿಮಾನ ತುರ್ತು ಭೂಸ್ಪರ್ಶ

ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಅನಾಮಧೇಯ ಕರೆ ಬಂದ ಹಿನ್ನಲೆಯಲ್ಲಿ ಗೋಏರ್ ವೈಮಾನಿಕ ಸಂಸ್ಥೆಯ ವಿಮಾನ ತುರ್ತು ಭೂಸ್ಪರ್ಶ ಮಾಡಿದ ಘಟನೆ ಶನಿವಾರ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದೆ...

ನಾಗಪುರ: ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಅನಾಮಧೇಯ ಕರೆ ಬಂದ ಹಿನ್ನಲೆಯಲ್ಲಿ ಗೋಏರ್ ವೈಮಾನಿಕ ಸಂಸ್ಥೆಯ ವಿಮಾನ ತುರ್ತು ಭೂಸ್ಪರ್ಶ ಮಾಡಿದ ಘಟನೆ ಶನಿವಾರ  ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದೆ.

ಭುವನೇಶ್ವರ-ಮುಂಬೈ ನಡುವೆ ಸಂಚರಿಸುತ್ತಿದ್ದ ಗೋಏರ್ ಸಂಸ್ಥೆಯ ವಿಮಾನ ಸಂಖ್ಯೆ ಜಿ8 243 ಸಂಖ್ಯೆಯ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ಬಿಜು ಪಟ್ನಾಯಕ್ ವಿಮಾನ  ನಿಲ್ದಾಣಕ್ಕೆಕರೆ ಬಂದ ಹಿನ್ನಲೆಯಲ್ಲಿ ವಿಮಾನವನ್ನು ಇಂದು ನಾಗಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ವಿಮಾನದಲ್ಲಿ ಸಿಬ್ಬಂದಿಗಳು ಸೇರಿದಂತೆ ಸುಮಾರು 150  ಮಂದಿ ಇದ್ದರು ಎಂದು ತಿಳಿದುಬಂದಿದೆ.

ವಿಮಾನ ಭೂಸ್ಪರ್ಶ ಮಾಡುತ್ತಿದ್ದಂತೆಯೇ ಪ್ರಯಾಣಿಕರನ್ನು ಕೆಳಗೆ ಇಳಿಸಿದ ಭದ್ರತಾ ಸಿಬ್ಬಂದಿಗಳು ಕೂಡಲೇ ವಿಮಾನದಲ್ಲಿ ಶೋಧ ಕಾರ್ಯ ಆರಂಭಿಸಿದರು. ಬಾಂಬ್ ಡಿಟೆಕ್ಟರ್ ಗಳು ಮತ್ತು  ಬಾಂಬ್ ನಿಷ್ಕ್ರಿಯ ಸಿಬ್ಬಂದಿಗಳು ವಿಮಾನದಲ್ಲಿ ಶೋಧ ನಡೆಸಿದರು. ಸತತ ಅರ್ಧ ಗಂಟೆಗೂ ಅಧಿಕ ಕಾಲ ಶೋಧ ನಡೆಸಿದರೂ ಯಾವುದೇ ಶಂಕಿತ ಸ್ಫೋಟಕಗಳು ಪತ್ತೆಯಾಗದ ಹಿನ್ನಲೆಯಲ್ಲಿ  ಅಧಿಕಾರಿಗಳು ಇದು ಸುಳ್ಳು ಬೆದರಿಕೆ ಕರೆ ಎಂದು ನಿರ್ಧಾರಕ್ಕೆ ಬಂದರು. ಬಳಿಕ ವಿಮಾನದ ಪ್ರಯಾಣ ಮುಂದುವರಿಕೆಗೆ ಅನುವು ಮಾಡಿಕೊಟ್ಟರು.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಗೋಏರ್ ಸಂಸ್ಥೆ ವಕ್ತಾರರು, ವಿಮಾನದಲ್ಲಿ ಯಾವುದೇ ಶಂಕಿತ ವಸ್ತುಗಳು ಪತ್ತೆಯಾಗಿಲ್ಲ. ಪ್ರಯಾಣಿಕರಿಗೆ ಯಾವುದೇ ಅಪಾಯವಿಲ್ಲ ಎಂದು  ಸ್ಪಷ್ಟನೆ ನೀಡಿದರು. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದು, ಕರೆ ಬಂದ ಮೊಬೈಲ್ ಸಂಖ್ಯೆಯನ್ನು ಪರಿಶೀಲನೆಗೊಳಪಡಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT