ಪ್ರಧಾನಿ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡ್ 
ದೇಶ

16 ಮಹತ್ವದ ಒಪ್ಪಂದಗಳ ಸಹಿಗೆ ಸಾಕ್ಷಿಯಾದ ಚಂಡೀಘಡ

ಚಂಡೀಗಢದ ರಾಕ್ ಗಾರ್ಡನ್​ನಲ್ಲಿ ನಡೆದ ವಾಣಿಜ್ಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡೆ ಅವರು 16 ಮಹತ್ವದ ಒಪ್ಪಂದಗಳಿಗೆ ಸಹಿ ಮಾಡಿದರು...

ಚಂಡೀಘಡ: ಚಂಡೀಗಢದ ರಾಕ್ ಗಾರ್ಡನ್​ನಲ್ಲಿ ನಡೆದ ವಾಣಿಜ್ಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡೆ ಅವರು 16 ಮಹತ್ವದ  ಒಪ್ಪಂದಗಳಿಗೆ ಸಹಿ ಮಾಡಿದರು.

ಫ್ರಾನ್ಸ್ ನ ಹಲವು ಉತ್ಪನ್ನಗಳಿಗೆ ಭಾರತದಲ್ಲಿ ಮಾರುಕಟ್ಟೆ ಕಲ್ಪಿಸುವ ಕುರಿತು ಮತ್ತು ಚಂಡೀಗಢ, ನಾಗಪುರ, ಪುದುಚೆರಿಗಳನ್ನು ಸ್ಮಾರ್ಟ್ ಸಿಟಿಯಾಗಿ ಪರಿವರ್ತಿಸುವ ಮಹತ್ವದ ಒಪ್ಪಂದಗಳು  ಸೇರಿದಂತೆ ಸುಮಾರು 16 ಒಪ್ಪಂದಗಳಿಗೆ ಉಭಯ ನಾಯಕರು ಸಹಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಉಳಿದಂತೆ ನಗರಾಭಿವೃದ್ಧಿ ಕ್ಷೇತ್ರದಲ್ಲಿ ತಂತ್ರಜ್ಞಾನ ಸಹಕಾರ, ಭಾರತದ ವಿವಿಧ  ರಾಜ್ಯಗಳಲ್ಲಿ ಪವನ ವಿದ್ಯುತ್ ಉತ್ಪಾದನೆ ಸೇರಿದಂತೆ ಹಲವು ಒಪ್ಪಂದಗಳಿಗೆ ಉಭಯ ನಾಯಕರು ಸಹಿ ಮಾಡಿದ್ದಾರೆ.

ಸಮ್ಮೇಳನದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಫ್ರಾನ್ಸ್​ನ  ಉತ್ಪನ್ನಗಳಿಗೆ ಭಾರತದಲ್ಲಿ ಮಾರುಕಟ್ಟೆ ಉತ್ತಮವಾಗಿದೆ. ಚಂಡೀಗಢ, ನಾಗಪುರ, ಪುದುಚೆರಿಗಳನ್ನು ಸ್ಮಾರ್ಟ್ ಸಿಟಿಯಾಗಿ ಪರಿವರ್ತಿಸಲು ಮುಂದಾದ ಫ್ರಾನ್ಸ್​ನ ನಿರ್ಧಾರವನ್ನು  ಸ್ವಾಗತಿಸುತ್ತೇನೆ. ಭಾರತದಲ್ಲಿ 800 ದಶಲಕ್ಷ ಯುವಕರಿದ್ದಾರೆ. ಇವರ ಸಹಕಾರದೊಂದಿಗೆ ಉತ್ತಮ ಆಡಳಿತ ನೀಡುವ ಮೂಲಕ ಜಾಗತಿಕವಾಗಿ ಭಾರತ ಉನ್ನತ ಮಟ್ಟಕ್ಕೆ ಏರಲಿದೆ ಎಂದರು.

ಬಳಿಕ ಮಾತನಾಡಿದ ಫ್ರಾನ್ಸ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡ್ ಅವರು, ವಿಶ್ವದಲ್ಲೇ ಭಾರತ ವಾಣಿಜ್ಯೋದ್ಯಮದಲ್ಲಿ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಭಾರತದ ಜತೆ  ಕಾರ್ಯನೀತಿ ಬಾಂಧವ್ಯವನ್ನು ವೃದ್ಧಿಸಿಕೊಳ್ಳುವುದು ನನ್ನ ಈ ಭೇಟಿಯ ಮುಖ್ಯ ಉದ್ದೇಶ. ಅಂದು ಮೋದಿ ಫ್ರಾನ್ಸ್​ಗೆ ಭೇಟಿ ನೀಡಿದ ಸಂದರ್ಭ ತೆಗೆದುಕೊಂಡ ನಿರ್ಧಾರಗಳನ್ನು ಕಾರ್ಯರೂಪಕ್ಕೆ  ತರುವುದು ಭೇಟಿಯ ಮೂಲ ಉದ್ದೇಶವಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel