ದೇಶ

3 ವೈದ್ಯ ವಿದ್ಯಾರ್ಥಿನಿಯರ ಆತ್ಮಹತ್ಯೆ

Vishwanath S

ಚೆನ್ನೈ: ರೋಹಿತ್ ಮೆಮುಲ ಆತ್ಮಹತ್ಯೆ ಬಳಿಕ ಇದೀಗ, ತಮಿಳುನಾಡಿನ ವೈದ್ಯಕೀಯ ಕಾಲೇಜೊಂದರ ಮೂವರು ವಿದ್ಯಾರ್ಥಿನಿಯರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಲ್ಲುಪುರಂನ ಖಾಸಗಿ ವೈದ್ಯಕೀಯ ಕಾಲೇಜಿನ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ವಿಭಾಗದ ಈ ಮೂವರು ವಿದ್ಯಾರ್ಥಿನಿಯರ ದೇಹಗಳು ಶನಿವಾರ ಸಂಜೆ ಬಾವಿಯಲ್ಲಿ ಪತ್ತೆಯಾಗಿವೆ.

ಘಟನಾ ಸ್ಥಳದಲ್ಲಿ ಆತ್ಮಹತ್ಯಾ ಪತ್ರ ಸಿಕ್ಕಿದ್ದು, ಸಾವಿಗೆ ಕಾಲೇಜಿನ ಆಡಳಿತ ಮಂಡಳಿಯೇ ಕಾರಣ ಎಂದು ಬರೆದಿಟ್ಟಿದ್ದಾರೆ ಎಂದು ಖಾಸಗಿ ಪತ್ರಿಕೆಯೊಂದು ವರದಿ ಮಾಡಿದೆ.

ಪ್ರಕರಣ ಸಂಬಂಧ ಆಡಳಿತ ಮಂಡಳಿಯ ಅಧ್ಯಕ್ಷನ ಪುತ್ರನನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

SCROLL FOR NEXT