ವಿಜಯ್ ಬಹದ್ದೂರ್ ಪಾಠಕ್ 
ದೇಶ

ಫೈರಿಂಗ್ ಆದೇಶ ನೋವಿನ ನಿರ್ಧಾರ ಎಂದರೆ ಸಾಲದು ಕ್ಷಮೆ ಯಾಚಿಸಿ: ಮುಲಾಯಂ ಗೆ ಬಿಜೆಪಿ ಆಗ್ರಹ

1990 ರಲ್ಲಿ ಕರಸೇವಕರ ಮೇಲೆ ಫಿರಿಂಗ್ ಗೆ ಆದೇಶ ನೀಡಿದ್ದು ನೋವಿನ ನಿರ್ಧಾರ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಬಿಜೆಪಿ ಮುಲಾಯಂ ಸಿಂಗ್ ಯಾದವ್ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದೆ.

ನವದೆಹಲಿ: 1990 ರಲ್ಲಿ  ಕರಸೇವಕರ ಮೇಲೆ ಫೈರಿಂಗ್ ಗೆ ಆದೇಶ ನೀಡಿದ್ದು ನೋವಿನ ನಿರ್ಧಾರ ಎಂದು ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಹೇಳಿಕೆ ನೀಡಿದ ಬೆನ್ನಲ್ಲೇ ಬಿಜೆಪಿ ಮುಲಾಯಂ ಸಿಂಗ್ ಯಾದವ್ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದೆ.

ಮುಲಾಯಂ ಸಿಂಗ್ ಯಾದವ್ ಅವರು ಗುಂಡಿಕ್ಕಲು ಆದೇಶಿಸಿದ ಕರಸೇವಕರ ಕೈಯಲ್ಲಿ ಯಾವುದೇ ಆಯುಧಗಳಿರಲಿಲ್ಲ ಆದರೂ ಮುಲಾಯಂ ಸಿಂಗ್ ಯಾದವ್ ಫೈರಿಂಗ್ ಗೆ ಆದೇಶ ನೀಡಿದ್ದರು. ಕರಸೇವಕರ ಮೇಲೆ ಗುಂಡಿನ ದಾಳಿ ನಡೆಸಿದ್ದು ಘೋರ ಅಪರಾಧ. ಫೈರಿಂಗ್ ಗೆ ಆದೇಶ ನೀಡಿದ್ದು ನೋವಿನ ನಿರ್ಧಾರ ಎಂದು ಹೇಳಿದರೆ ಸಾಲದು ಈ ಬಗ್ಗೆ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ವಕ್ತಾರ ವಿಜಯ್ ಬಹದ್ದೂರ್ ಪಾಠಕ್ ಹೇಳಿದ್ದಾರೆ.

ಕರಸೇವಕರು ಸಾಂಕೇತಿಕವಾಗಿ ಪ್ರತಿಭಟನೆ ಮಾಡಲು ಮುಂದಾದ ವೇಳೆಯಲ್ಲೇ ಗುಂಡಿಕ್ಕಲು ಆದೇಶಿಸಲಾಗಿದೆ. 25 ವರ್ಷಗಳ ನಂತರ ನೋವಿನ ನಿರ್ಧಾರ ಎಂದು ಹೇಳಿದರೆ ಮಾಡಿದವರ ಕುಟುಂಬದ ದುಃಖ ಕಡಿಮೆಯಾಗುವುದಿಲ್ಲ ಎಂದು ಪಾಠಕ್ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT