ಅಮಿತ್ ಶಾ 
ದೇಶ

ಮಮತಾ ಅವಧಿಯಲ್ಲಿ ಬಂಗಾಳ ರಾಷ್ಟ್ರ ವಿರೋಧಿಗಳ ಕೇಂದ್ರ: ಅಮಿತ್ ಶಾ

ತೃಣಮೂಲ ಕಾಂಗ್ರೆಸ್ ಶರಧ ಹಗರಣದಲ್ಲಿ ಹಾಗೂ ಉಗ್ರ ಕೃತ್ಯಗಳಲ್ಲಿ...

ಹೌರಾ: ತೃಣಮೂಲ ಕಾಂಗ್ರೆಸ್ ಶಾರದ ಹಗರಣದಲ್ಲಿ ಹಾಗೂ ಉಗ್ರ ಕೃತ್ಯಗಳಲ್ಲಿ ಭಾಗಿಯಾಗಿದೆ ಎಂದು ಆರೋಪಿಸಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು, ಮಮತಾ ಬ್ಯಾನರ್ಜಿ ಆಡಳಿತವಧಿಯಲ್ಲಿ ಪಶ್ಚಿಮ ಬಂಗಾಳ ರಾಷ್ಟ್ರ ವಿರೋಧಿಗಳ ಕೇಂದ್ರ ಸ್ಥಾನವಾಗಿದೆ ಎಂದು ಸೋಮವಾರ ಹೇಳಿದ್ದಾರೆ.
ಬಿಜೆಪಿ ಅಧ್ಯಕ್ಷರಾಗಿ ಮರು ಆಯ್ಕೆಯಾದ ನಂತರ ಮೊದಲ ಬಾರಿಗೆ ಪಶ್ಚಿಮ ಬಂಗಾಳದಲ್ಲಿ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಬಹುಕೋಟಿ ಶಾರದ ಹಗರಣ, ಕಳೆದ ವರ್ಷ ಬುರ್ದ್ವಾನ್‌ನ ಖಗ್ರಗಢ ಮತ್ತು ಮಾಲ್ಡಾ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಹಾಗೂ ತೃಣಮೂಲ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
'ಜಗತ್ತು ಮಮತಾ ಅವರನ್ನು ಬೆಂಗಾಳ ಮುಖ್ಯಮಂತ್ರಿ ಎಂದು ಗುರುತಿಸಿದರೆ, ಚಿಟ್ ಫಂಡ್ ಹಗರಣದಲ್ಲಿ ಭಾಗಿಯಾಗಿರುವವರು ಮಾತ್ರ ಅವರನ್ನು ಒಬ್ಬ ಪೇಂಟರ್ ಎಂದು ಗುರುತಿಸುತ್ತಾರೆ ಮತ್ತು ಅವರ ಪೇಂಟಿಂಗ್‌ಗಳನ್ನು ಕೋಟ್ಯಾಂತರ ರುಪಾಯಿಗೆ ಖರೀದಿಸುತ್ತಾರೆ' ಎಂದು ಶಾ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT