ಜಾವೇದ್ ಅಖ್ತರ್ 
ದೇಶ

ಕೆಲ ಹಿಂದೂ ಗುಂಪುಗಳು ಮುಸ್ಲಿಂ ಮೂಲವಾದಿಗಳಂತೆ ವರ್ತಿಸುತ್ತಿವೆ: ಜಾವೇದ್ ಅಖ್ತರ್

ಅಸಹಿಷ್ಣುತೆ ಕುರಿತಂತೆ ಚರ್ಚೆಯೊಂದರಲ್ಲಿ ಭಾಗವಹಿಸಿದ್ದ ಖ್ಯಾತ ಸಾಹಿತಿ, ಬಾಲಿವುಡ್‌ನ ಹಿರಿಯ ಗೀತ ರಚನೆಕಾರ ಜಾವೇದ್ ಅಖ್ತರ್ ಅವರು ಕೆಲವು ಹಿಂದೂ...

ಕೋಲ್ಕತಾ: ಅಸಹಿಷ್ಣುತೆ ಕುರಿತಂತೆ ಚರ್ಚೆಯೊಂದರಲ್ಲಿ ಭಾಗವಹಿಸಿದ್ದ ಖ್ಯಾತ ಸಾಹಿತಿ, ಬಾಲಿವುಡ್‌ನ ಹಿರಿಯ ಗೀತ ರಚನೆಕಾರ ಜಾವೇದ್ ಅಖ್ತರ್ ಅವರು, ಕೆಲವು ಹಿಂದೂ ಸಂಘಟನೆಗಳು ಮುಸ್ಲಿಂ ಮೂಲಭೂತವಾದಿಗಳಂತೆ ವರ್ತಿಸುತ್ತಿದ್ದಾರೆ ಎಂದು ಹೇಳಿದ್ದಾರೆ. 
1975ರಲ್ಲಿ ನಾನು ಒಂದು ಹಾಸ್ಯ ದೃಶ್ಯವನ್ನು ದೇವಸ್ಥಾನದಲ್ಲಿ ತೋರಿಸಿದ್ದೆ. ಅದು ಈಗ ತೋರಿಸಲು ಸಾಧ್ಯವಿಲ್ಲ. ಆದರೆ, 1975ರಲ್ಲೂ ನನಗೆ ಮಸೀದಿಯಲ್ಲಿ ಅಂತಹ ದೃಶ್ಯ ತೋರಿಸುವುದಕ್ಕೆ ಸಾಧ್ಯವಿರಲಿಲ್ಲ ಅಷ್ಟು ಪ್ರಮಾಣದ ಅಸಹಿಷ್ಣುತೆ ಅಲ್ಲಿದೆ. ಈಗ ಅದಕ್ಕೆ ಮತ್ತೊಂದು ಹೋಲಿಕೆಯಾಗುತ್ತಿದೆ ಎಂದು ಅಖ್ತರ್ ತಿಳಿಸಿದ್ದಾರೆ. 
ಪ್ರಸ್ತುತ ದಿನಗಳಲ್ಲಿ ಎಲ್ಲವನ್ನೂ ಒಂದೇ ಅರ್ಥದಲ್ಲಿ ನೋಡುತ್ತಾರೆ. ಹಾಗಾಗಿ, ಹಿಂದೂ ಅಂತ ಹೇಳಬೇಡಿ. ಅದು ತಪ್ಪಾಗುತ್ತದೆ. ಕೆಲವು ಹಿಂದೂ ಗುಂಪುಗಳು ಎಂದು ಹೇಳಿ ಎಂದು ಚರ್ಚೆ ವೇಳೆ ಹೇಳಿದ್ದಾರೆ.
ಅಸಹಿಷ್ಣುತೆ ಅಪಾಯ ಮಟ್ಟಕ್ಕೆ ಬಂದು ನಿಂತಿದೆ ಎಂದು ಕೆಲವರು ಹೇಳುತ್ತಾರೆ. ಇನ್ನು ಕೆಲವರು ದೇಶದಲ್ಲಿ ಅಸಹಿಷ್ಣುತೆ ಇಲ್ಲವೇ ಇಲ್ಲ ಎಂದು ವಾದಿಸುತ್ತಿದ್ದಾರೆ. ಆದರೆ, ನಾನು ಇವರೆಡೂ ಹೇಳಿಕೆಗಳನ್ನು ನಂಬುವುದಿಲ್ಲ. ಸತ್ಯವೆಂಬದು ಈ ಎರಡು ಹೇಳಿಕೆಗಳ ನಡುವೆಯೇ ಇದೆ. ಭಾರತೀಯ ಸಮಾಜ ಯಾವಾಗಲೂ ಸಹಿಷ್ಣುತೆಯಿಂದ ಕೂಡಿದೆ. ಕೆಲವು ಗುಂಪುಗಳು ಮಾತ್ರ ಯಾವಾಗಲೂ ಯುದ್ಧ ಬಯಸುತ್ತಿರುತ್ತವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT