ಬಿಜಿತಾ ನಾಥ್ 
ದೇಶ

ಗಣರಾಜ್ಯೋತ್ಸವದಂದು ಸ್ವಾತಂತ್ರ್ಯ ದಿನಾಚರಣೆ ಶುಭಾಶಯ ಕೋರಿದ ಸಚಿವೆ

ಸಚಿವೆ ಬಿಜಿತಾ ನಾಥ್ ತ್ರಿಪುರಾದ ಧರ್ಮ ನಗರದ ಬಿಬಿಐ ಮೈದಾನದಲ್ಲಿ ಹಮ್ಮಿಕೊಂಡಿದ್ದ 67 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡುವಾಗ ಜನತೆಗೆ ಸ್ವಾತಂತ್ರ್ಯ ದಿನಾಚರಣೆ ಶುಭಾಶಯ ಹೇಳಿದರೆಂದು...

ತ್ರಿಪುರಾ: ಯಾವುದೇ ಅಡಚಣೆಗಳಿಲ್ಲದೇ ದೇಶಾದ್ಯಂತ 67 ನೇ ಗಣ ರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಆದರೆ ಗಣರಾಜ್ಯೋತ್ಸವ ದಿನದಂದು ಸ್ವಾತಂತ್ರ್ಯ ದಿನಾಚರಣೆ ಶುಭಾಶಯ ಕೋರಿ ಮಣಿಪುರದ ಸಚಿವೆ ಯಡವಟ್ಟು ಮಾಡಿದ್ದಾರೆ.

ಸಚಿವೆ ಬಿಜಿತಾ ನಾಥ್ ತ್ರಿಪುರಾದ ಧರ್ಮ ನಗರದ ಬಿಬಿಐ ಮೈದಾನದಲ್ಲಿ ಹಮ್ಮಿಕೊಂಡಿದ್ದ 67 ನೇ ಗಣರಾಜ್ಯಾತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡುವಾಗ ಜನತೆಗೆ ಸ್ವಾತಂತ್ರ್ಯ ದಿನಾಚರಣೆ ಶುಭಾಶಯ ಹೇಳಿದರೆಂದು ವರದಿ ಮಾಡಲಾಗಿದೆ.

ಎಲ್ಲರಿಗೂ 67 ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ದೇಶಕ್ಕಾಗಿ ಹೋರಾಟ ನಡೆಸಿ, ಅಪಾರ ಕೊಡುಗೆ ನೀಡಿರುವ ಎಲ್ಲಾ ನಾಯಕರನ್ನು ಈ ವೇಳೆ ನಾವು ಸ್ಮರಿಸಬೇಕು ಎಂದು ತಾವು ಬರೆದು ತಂದಿದ್ದ ಟಿಪ್ಪಣಿ ನೋಡಿ ಹೇಳಿದರು.

ಸಚಿವರು ಹಲವು ಬಾರಿ ಸ್ವಾತಂತ್ರ್ಯ ದಿನಾಚರಣೆ ಎಂದು ಹೇಳಿದರು. ಹಿಂದೊಮ್ಮೆ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮ ದಿನಾಚರಣೆಯನ್ನು ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಎಂದು ಹೇಳಿದ್ದರು.

ಇನ್ನು ಸಾಮಾನ್ಯ ಜ್ಞಾನ ಇಲ್ಲದವರು ಸಮಾಜ ಕಲ್ಯಾಣ ಮತ್ತು ಸಾಮಾಜಿಕ ಶಿಕ್ಷಣದಂತ ಖಾತೆಗಳನ್ನು ನಿರ್ವಹಿಸಬಾರದು ಎಂದು ಬಿಜೆಪಿ ಆಗ್ರಹಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT