ಬಿಜಿತಾ ನಾಥ್ 
ದೇಶ

ಗಣರಾಜ್ಯೋತ್ಸವದಂದು ಸ್ವಾತಂತ್ರ್ಯ ದಿನಾಚರಣೆ ಶುಭಾಶಯ ಕೋರಿದ ಸಚಿವೆ

ಸಚಿವೆ ಬಿಜಿತಾ ನಾಥ್ ತ್ರಿಪುರಾದ ಧರ್ಮ ನಗರದ ಬಿಬಿಐ ಮೈದಾನದಲ್ಲಿ ಹಮ್ಮಿಕೊಂಡಿದ್ದ 67 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡುವಾಗ ಜನತೆಗೆ ಸ್ವಾತಂತ್ರ್ಯ ದಿನಾಚರಣೆ ಶುಭಾಶಯ ಹೇಳಿದರೆಂದು...

ತ್ರಿಪುರಾ: ಯಾವುದೇ ಅಡಚಣೆಗಳಿಲ್ಲದೇ ದೇಶಾದ್ಯಂತ 67 ನೇ ಗಣ ರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಆದರೆ ಗಣರಾಜ್ಯೋತ್ಸವ ದಿನದಂದು ಸ್ವಾತಂತ್ರ್ಯ ದಿನಾಚರಣೆ ಶುಭಾಶಯ ಕೋರಿ ಮಣಿಪುರದ ಸಚಿವೆ ಯಡವಟ್ಟು ಮಾಡಿದ್ದಾರೆ.

ಸಚಿವೆ ಬಿಜಿತಾ ನಾಥ್ ತ್ರಿಪುರಾದ ಧರ್ಮ ನಗರದ ಬಿಬಿಐ ಮೈದಾನದಲ್ಲಿ ಹಮ್ಮಿಕೊಂಡಿದ್ದ 67 ನೇ ಗಣರಾಜ್ಯಾತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡುವಾಗ ಜನತೆಗೆ ಸ್ವಾತಂತ್ರ್ಯ ದಿನಾಚರಣೆ ಶುಭಾಶಯ ಹೇಳಿದರೆಂದು ವರದಿ ಮಾಡಲಾಗಿದೆ.

ಎಲ್ಲರಿಗೂ 67 ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ದೇಶಕ್ಕಾಗಿ ಹೋರಾಟ ನಡೆಸಿ, ಅಪಾರ ಕೊಡುಗೆ ನೀಡಿರುವ ಎಲ್ಲಾ ನಾಯಕರನ್ನು ಈ ವೇಳೆ ನಾವು ಸ್ಮರಿಸಬೇಕು ಎಂದು ತಾವು ಬರೆದು ತಂದಿದ್ದ ಟಿಪ್ಪಣಿ ನೋಡಿ ಹೇಳಿದರು.

ಸಚಿವರು ಹಲವು ಬಾರಿ ಸ್ವಾತಂತ್ರ್ಯ ದಿನಾಚರಣೆ ಎಂದು ಹೇಳಿದರು. ಹಿಂದೊಮ್ಮೆ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮ ದಿನಾಚರಣೆಯನ್ನು ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಎಂದು ಹೇಳಿದ್ದರು.

ಇನ್ನು ಸಾಮಾನ್ಯ ಜ್ಞಾನ ಇಲ್ಲದವರು ಸಮಾಜ ಕಲ್ಯಾಣ ಮತ್ತು ಸಾಮಾಜಿಕ ಶಿಕ್ಷಣದಂತ ಖಾತೆಗಳನ್ನು ನಿರ್ವಹಿಸಬಾರದು ಎಂದು ಬಿಜೆಪಿ ಆಗ್ರಹಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT