ಇಸೀಸ್ ಉಗ್ರ ಸಂಘಟನೆ (ಸಂಗ್ರಹ ಚಿತ್ರ) 
ದೇಶ

ಇರಾಕ್, ಸಿರಿಯಾ ಮಾದರಿಯ ಹಿಂಸಾಚಾರ ನಡೆಸಿ ಭಾರತ ಸರ್ಕಾರದ ಪತನಕ್ಕೆ ಸಂಚು ರೂಪಿಸಿದ್ದ ಇಸೀಸ್ ಉಗ್ರರು!

ಗಣರಾಜ್ಯೋತ್ಸವದ ದಿನದಂದು ಭಾರಿ ವಿಧ್ವಂಸಕ ಕೃತ್ಯ ನಡೆಸುವ ಮೂಲಕ ಕೇಂದ್ರ ಸರ್ಕಾರವನ್ನು ಪತನಗೊಳಿಸಲು ಉಗ್ರರು ಯೋಜನೆ ರೂಪಿಸಿದ್ದರು.

ನವದೆಹಲಿ: ಭಾರತದಲ್ಲಿ ಇಸೀಸ್ ಉಗ್ರ ಸಂಘಟನೆ ಆಳವಾಗಿ ಬೇರೂರಿರುವ ಸಾಧ್ಯತೆಗಳು ದಟ್ಟವಾಗಿರುವ ಶಂಕೆ ವ್ಯಕ್ತವಾಗಿದೆ. ಗಣರಾಜ್ಯೋತ್ಸವದ ದಿನದಂದು ಭಾರಿ ವಿಧ್ವಂಸಕ ಕೃತ್ಯ ನಡೆಸುವ ಮೂಲಕ ಕೇಂದ್ರ ಸರ್ಕಾರವನ್ನು ಪತನಗೊಳಿಸಲು ಉಗ್ರರು ಯೋಜನೆ ರೂಪಿಸಿದ್ದರು ಎಂಬ ಆಘಾತಕಾರಿ ಅಂಶವನ್ನು ಬಂಧಿತ ಶಂಕಿತ ಉಗ್ರರು ಎನ್ಐಎ ತನಿಖೆ ವೇಳೆ ಬಾಯ್ಬಿಟ್ಟಿದ್ದಾರೆ.

ಕೇಂದ್ರ ಸರ್ಕಾರವನ್ನು ಪತನಗೊಳಿಸಿದ ನಂತರ ದೆಹಲಿಯಲ್ಲಿ ಷರಿಯಾ ಕಾನೂನು ಹೇರುವ ಮೂಲಕ ಇಸ್ಲಾಮಿಕ್ ಆಡಳಿತ ಜಾರಿಗೆ ತರುವುದು ಉಗ್ರರ ಗುರಿಯಾಗಿತ್ತು ಎಂಬುದು ಎನ್ಐಎ ತನಿಖೆ ವೇಳೆ ಬಯಲಾಗಿದೆ. ಇರಾಕ್ ಹಾಗೂ ಸಿರಿಯಾದಲ್ಲಿ ಇಸೀಸ್ ಉಗ್ರ ಸಂಘಟನೆ ನಡೆಸುತ್ತಿರುವ ಮಾದರಿಯಲ್ಲೇ ಭಾರತದಲ್ಲೂ ಹಿಂಸಾಚಾರ ನಡೆಸಿ ಸರ್ಕಾರವನ್ನು ಪತನಗೊಳಿಸುವುದು ಉಗ್ರರ ಮುಖ್ಯ ಉದ್ದೇಶವಾಗಿತ್ತು.  
 
ಭಾರತದಲ್ಲಿ ಇಸ್ಲಾಮಿಕ್ ಆಡಳಿತ ಪಾಲಿಸದ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಷರಿಯಾ ಕಾನೂನು ಜಾರಿಗೆ ತರುವ ಅಗತ್ಯವಿದೆ ಎಂದು ವಿಚಾರಣೆ ವೇಳೆ ಉಗ್ರರು ಹೇಳಿಕೊಂಡಿದ್ದಾರೆ. ದೇಶಾದ್ಯಂತ ದುಷ್ಕೃತ್ಯಗಳನ್ನು ಎಸಗಲು ಭಾರಿ ಪ್ರಮಾಣದ ಸೋಟಕ ಹಾಗೂ ಶಸ್ತ್ರಾಸ್ತ್ರಗಳನ್ನು ಪಡೆಯಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಸಿರಿಯಾ ಹಾಗೂ ಇರಾಕ್‌ನಲ್ಲಿರುವ ಐಸಿಸ್‌ನ ಪ್ರಮುಖ ಉಗ್ರರೊಂದಿಗೆ ಬಂಧಿತರು ಸತತ ಸಂಪರ್ಕದಲ್ಲಿದ್ದರು ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ. ಇಸೀಸ್ ನೊಂದಿಗೆ ಸಂಪರ್ಕ ಹೊಂದಿದ್ದ 14ಕ್ಕೂ ಹೆಚ್ಚು ಶಂಕಿತರನ್ನು ಇತ್ತೀಚೆಗೆ ಬಂಧಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT