ವಿಕಾಸ್ ಸ್ವರೂಪ್ 
ದೇಶ

ಭಾರತ-ಪಾಕ್ ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆ ದಿನಾಂಕ ಇನ್ನೂ ನಿಗದಿಯಾಗಿಲ್ಲ

ಪರಸ್ಪರ ಒಪ್ಪಿಗೆಯೊಂದಿಗೆ ಭಾರತ-ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆಯ ದಿನಾಂಕ ನಿಗದಿಪಡಿಸಲು ಇದುವರೆಗೂ ಉಭಯ...

ನವದೆಹಲಿ: ಪರಸ್ಪರ ಒಪ್ಪಿಗೆಯೊಂದಿಗೆ ಭಾರತ-ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆಯ ದಿನಾಂಕ ನಿಗದಿಪಡಿಸಲು ಇದುವರೆಗೂ ಉಭಯ ರಾಷ್ಟ್ರಗಳಿಗೆ ಸಾಧ್ಯವಾಗಿಲ್ಲ. 
ಭಾರತ-ಪಾಕ್ ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆಯ ಬಗ್ಗೆ ಪ್ರತಿಕ್ರಿಯಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ವಿಕಾಸ್ ಸ್ವರೂಪ್ ಅವರು,  'ಇದುವರೆಗೂ ಎರಡು ದೇಶಗಳಿಗೂ ಅನುಕೂಲಕರವಾದ ದಿನಾಂಕ ಸಿಕ್ಕಿಲ್ಲ' ಎಂದು ಹೇಳಿದ್ದಾರೆ.
ಇನ್ನು ಪಠಾಣ್‌ಕೋಟ್ ಉಗ್ರ ದಾಳಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಉಭಯ ದೇಶಗಳ ಸರ್ಕಾರಗಳು ನಿರಂತರ ಸಂಪರ್ಕದಲ್ಲಿರುವುದಾಗಿ ಅವರು ತಿಳಿಸಿದರು. ಆದರೆ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಸ್ವರೂಪ್ ನಿರಾಕರಿಸಿದರು.
ಇದೇ ವೇಳೆ ಮುಂಬೈ ದಾಳಿ ಪ್ರಕರಣಕ್ಕೆ ಸಂಬಂಧಿಸದಂತೆ ಉಗ್ರ ಝಕಿಉರ್ ರೆಹಮಾನ್ ಲಖ್ವಿ ಧ್ವನಿ ಮಾದರಿ ನೀಡಲು ಪಾಕ್ ನಿರಾಕರಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸ್ವರೂಪ್, ಈ ಬಗ್ಗೆ ಮಾಧ್ಯಮ ವರದಿ ನೋಡಿದ್ದೇನೆ. ಆದರೆ ನಮಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT